12:14 AM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಲವಿ ಗಂಜಿಮಠ ಹಾಗೂ ‘ಆಮ್ಚೆಂ ಶೆತ್’ ಪತ್ರಿಕೆಗೆ ‘ರಾಕ್ಣೊ’ ಪ್ರಶಸ್ತಿ

01/09/2024, 20:52

ಮಂಗಳೂರು(reporter Karnataka.com): ಕೊಂಕಣಿ ಭಾಷೆಯ ಪ್ರಸಿದ್ಧ ಲೇಖಕಿಯಾಗಿರುವ ಲವಿ ಗಂಜಿಮಠ ರವರಿಗೆ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ 2024’ ಹಾಗೂ ‘ಧರ್ಮಕೇಂದ್ರದ ಅತ್ಯುತ್ತಮ ಪತ್ರಿಕೆ 2024’ ವನ್ನು ಬಜ್ಪೆ ಧರ್ಮ ಕೇಂದ್ರದ ಪತ್ರಿಕೆ ‘ಆಮ್ಚೆಂ ಶೆತ್’ ಎಂಬ ಪತ್ರಿಕೆಗೆ ಸೆಪ್ಟೆಂಬರ್ 1ರಂದು ನೀಡಿ ಗೌರವಿಸಲಾಯಿತು.

ಮಂಗಳೂರು ಧರ್ಮಾಧ್ಯಕ್ಷರ ನಿವಾಸದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ಧರ್ಮಕ್ಷೇತ್ರದ ಧರ್ಮಧ್ಯಕ್ಷರಾಗಿರುವ ಅತಿ ವಂದನೀಯ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ್ಹಾರವರು ಪ್ರಶಸ್ತಿ ಪ್ರದಾನ ಮಾಡಿದರು. ‘ರಾಕ್ಣೊ’ ವಾರಪತ್ರಿಕೆಯ ಸಂಪಾದಕರಾಗಿರುವ ವಂದನೀಯ ರೂಪೇಶ್ ಮಾಡ್ತಾ ಅವರು ಪ್ರಶಸ್ತಿಯ ಹಾಗೂ ಸಮಾವೇಶದ ಉದ್ದೇಶಗಳನ್ನು ವಿವರಿಸಿದರು. ‘ಕೊಂಕಣಿ ಭಾಷೆಗೆ ಅದರದ್ದೇ ಆದ ದಿಗಂತವಿದೆ. ಈ ಭಾಷೆಗೆ ಬೆಳೆಯಲು ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿರುವ ‘ರಾಕ್ಣೊ’ ಪತ್ರಿಕೆಗೆ ಸಹಕಾರ ಕೋರುತ್ತೇನೆ. ಪ್ರಶಸ್ತಿ ವಿಜೇತರಿಗೆ ಮತ್ತು ಎಲ್ಲಾ ಸಾಹಿತಿಗಳಿಗೆ ಅಭಿನಂದಿಸುತ್ತೇನೆ ‘ ಎಂದು ಬಿಷಪ್ ಆಶೀರ್ವಚನ ನೀಡಿದರು.
ಡಾ. ಎಡ್ವರ್ಡ್ ನಜ್ರೆತ್ ರವರು ಪ್ರಶಸ್ತಿ ವಿಜೇತರ ಪರಿಚಯ ಮಾಡಿಕೊಟ್ಟರು. ನಂತರ ನಡೆದ ಕೊಂಕಣಿ ಲೇಖಕರ ಸಮಾವೇಶದಲ್ಲಿ ಪ್ರಸಿದ್ಧ ಕೊಂಕಣಿ ಕವಿ ಆಂಡ್ರ್ಯೂ ಎಲ್ ಡಿಕೂನ್ಹಾರವರು ಕವಿತೆ ಮತ್ತು ಕಾವ್ಯಾತ್ಮಕ ಬದುಕು ಎಂಬ ಬಗ್ಗೆ, ಲವೀ ಗಂಜಿಮಠರವರು ಪತ್ರಿಕೆಯನ್ನು ಸಂಪಾದಸುವ ಬಗ್ಗೆ ಹಾಗೂ ‘ ನಮಾನ್ ಬಾಳಕ್ ಜೆಜು’ ಪತ್ರಿಕೆಯ ಸಂಪಾದಕರಾಗಿರುವ ವಂದನೀಯ ಐವನ್ ಡಿಸೋಜ಼ರವರು ಓದುಗರ ಪತ್ರವನ್ನು ಬರೆಯುವ ಬಗ್ಗೆ ವಿವರಿಸಿದರು. ನಂತರ ವಂದನೀಯ ರೂಪೇಶ್ ಮಾಡ್ತಾರವರು ಸಂವಾದವನ್ನು ನಡೆಸಿಕೊಟ್ಟರು. ಕಾರ್ಯಕ್ರಮವನ್ನು ಸಂಪಾದಕ ಮಂಡಳಿಯ ಸದಸ್ಯರಾಗಿರುವ ಫ್ರಾನ್ಸಿಸ್ ಡಿ ಕೂನ್ಹಾರವರು ನಿರ್ವಹಿಸಿದರು. ಸಂಪಾದಕ ಮಂಡಳಿಯ ಸದಸ್ಯರಾಗಿರುವ ಪ್ರಮೋದ್ ಹೊಸ್ಪೆಟ್ , ಡಾ. ಎಡ್ವರ್ಡ್ ನಜ್ರೆತ್ ಹಾಗೂ ಲವೀ ಗಂಜಿಮಠ ಅವರು ಸಹಕರಿಸಿದರು. ಹಿರಿಯ ಸಾಹಿತಿಗಳಾದ ವಂದನೀಯ ಅಲ್ಫೋನ್ಸ್ ಡಿಲೀಮಾ, ಡಾಲ್ಫಿ ಕಾಸ್ಸಿಯ, ಎಚ್. ಆರ್. ಆಳ್ವ ಅಲ್ಲದೆ 70 ಹೆಸರಾಂತ ಬರಹಗಾರರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು