1:45 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಶಿವಮೊಗ್ಗದ ಕೇಂದ್ರ ಕಾರಾಗೃಹ: ಬೀಡಿಗಾಗಿ ಜೈಲಿನ 778 ಖೈದಿಗಳ ಪ್ರತಿಭಟನೆ; ಮನವೊಲಿಕೆಗೆ ಅಧಿಕಾರಿಗಳ ಯತ್ನ

02/09/2024, 17:29

ಶಿವು ರಾಠೋಡ ಹುಣಸಗಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಬೀಡಿಗಾಗಿ ಪ್ರತಿಭಟನೆ ನಡೆಸಿದ್ದಾರೆ. ಜೈಲಿನ 778 ಕೈದಿಗಳು ಇಂದು ಬೆಳಗ್ಗಿನ ಉಪಹಾರವನ್ನು ಸೇವಿಸಿದೇ ಪ್ರತಿಭಟನೆ ನಡೆಸಿದ್ದಾರೆ.
ಕಾರಾಗೃಹ ಇಲಾಖೆಯ ಬಿಗಿ ಕ್ರಮದಿಂದ ಜೈಲಿನಲ್ಲಿ ಬಿಡಿಯು ಸಹ ಸಿಗುತ್ತಿಲ್ಲ. ಆದರೆ ಬೀಡಿ ಸಿಗರೇಟಿನ ಚಟಕ್ಕೆ ಅಡಿಕ್ಟ್ ಆಗಿರುವ ಕೈದಿಗಳು ಅದರಿಂದ ಬಿಡಿಸಿಕೊಳ್ಳಲಾಗದೇ ಒದ್ದಾಡುತ್ತಿದ್ದಾರೆ.
ಇದೇ ಕಾರಣಕ್ಕೆ ಇಂದು ಒಗ್ಗಟ್ಟಿನ ಪ್ರತಿಭಟನೆ ನಡೆಸುತ್ತಿದ್ದಾರೆ. ಜೈಲಿನಲ್ಲಿ ಬೆಳಗಿನ ಉಪಾಹಾರವನ್ನು ತ್ಯಜಿಸಿರುವ ಕೈದಿಗಳು ಉಪವಾಸ ಸತ್ಯಾಗ್ರಹ ಮಾಡುವುದಾಗಿ ಹೇಳುತ್ತಿದ್ದಾರೆ.
ಅವರ ಮನವೊಲಿಸುವ ಸಲುವಾಗಿ ಕಾರಾಗೃಹ ಇಲಾಖೆಯ ಅಧಿಕಾರಿಗಳ ತಂಡ ಪ್ರಯತ್ನ ನಡೆಸುತ್ತಿದೆ. ಆದಾಗ್ಯು ಅಧಿಕಾರಿಗಳ ಮಾತಿಗೆ ಕೈದಿಗಳು ಸುಮ್ಮನಾಗುತ್ತಿಲ್ಲ. ಬೇಕೆಬೇಕು ಬೀಡಿಯಾದರೂ ಬೇಕು ಎಂದು ಪ್ರತಿಭಟನೆ ಮುಂದುವರೆಸಿದ್ದಾರೆ ಎಂದು ಹೇಳಲಾಗಿದೆ.

ಶಿವಮೊಗ್ಗ ಕೇಂದ್ರ ಕಾರಾಗೃಹದ ಮೇಲೆ ಇತ್ತೀಚೆಗೆಷ್ಟೆ ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ನೇತೃತ್ವದ 100ಕ್ಕೂ ಹೆಚ್ಚು ಪೊಲೀಸರ ತಂಡ ರೇಡ್ ನಡೆಸಿತ್ತು. ಈ ವೇಳೆ ಮ್ಯಾಚ್ ಬಾಕ್ಸ್ ಹಾಗೂ ಬೀಡಿಯ ಬಂಡಲ್ ಮತ್ತು ಚಾರ್ಜರ್ ವಯರ್ ಸಿಕ್ಕಿತ್ತು. ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸಹ ದಾಖಲಾಗಿತ್ತು. ಇದರ ಬೆನ್ನಲ್ಲೆ ಶಿವಮೊಗ್ಗ ಜೈಲಿಗೆ ದರ್ಶನ್ ಗ್ಯಾಂಗ್‌ನ ಇಬ್ಬರು ಆರೋಪಿಗಳು ಇನ್ ಆಗಿದ್ದರು. ಆನಂತರ ಜೈಲಿನಲ್ಲಿ ಇನ್ನಷ್ಟು ಬಂದೋಬಸ್ತ್ ಮಾಡಲಾಗಿತ್ತು. ಇವೆಲ್ಲದರ ಪರಿಣಾಮವಾಗಿ ಕೈದಿಗಳಿಗೆ ಬೀಡಿ ಸಿಗದಂತಾಗಿದೆ. ಇದರಿಂದ ಸಿಟ್ಟಿಗೆದ್ದಿರುವ ಕೈದಿಗಳು ಪ್ರತಿಭಟನೆಗೆ ಇಳಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು