10:27 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಲೋಕಕಲ್ಯಾಣಾರ್ಥ: ರಾಮೇಶ್ವರ ದೇವಸ್ಥಾನದಲ್ಲಿ ಶತಚಂಡಿ ಯಾಗ ಸಂಪನ್ನ

02/09/2024, 20:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಸೋಮವಾರ ಶತಚಂಡೀ ಪುರಶ್ಚರಣ ಯಾಗ ಬಹಳ ವಿಜೃಂಭಣೆಯಿಂದ ನಡೆಯಿತು.

ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯರ ಆಶೀರ್ವಾದದಿಂದ ಶ್ರೀ ಭಾರತೀತೀರ್ಥ ಮಹಾಸ್ವಾಮಿ ಸನ್ನಿದಾನಂಗಳವರ ಮತ್ತು ತತ್ಕರಕಮಲ ಸಂಜಾತರಾದ ಶ್ರೀಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸನ್ನಿದಾನಂಗಳವರ
ಸಂಪೂರ್ಣ ಅನುಗ್ರಹದಿಂದ ಲೋಕಕಲ್ಯಾಣಾರ್ಥವಾಗಿ
ಶ್ರೀ ರಾಮೇಶ್ವರ ದೇವರ ಸನ್ನಿಧಿಯಲ್ಲಿ ಶತಚಂಡೀ ಪುರಶ್ಚರಣ ಯಾಗ ಲಕ್ಷ್ಮೀಶ ತಂತ್ರಿ ರವರ ಮಾರ್ಗದರ್ಶನದಲ್ಲಿ ಸುಮಾರು ಮುವತೈದಕ್ಕೂ ಹೆಚ್ಚು ಶೃಂಗೇರಿ ವೃಗ್ವೇದದವರಿಂದ ಚಂಡಿಕಾ ಯಾಗ ನೆರವೇರಿತು.
ಈ ಮಹತ್ಕಾರ್ಯದಲ್ಲಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಸೊಪ್ಪು ಗುಡ್ಡೆ ರಾಘವೇಂದ್ರ, ಜೀವಂದರ್ ಜೈನ್, ಲಾಯರ್ ಲೋಕೇಶ್, ಪಟ್ಟಣ ಪಂಚಾಯಿತಿ ಸದಸ್ಯರು ಸೇರಿದಂತೆ ಸುಮಾರು ಎರಡು ಸಾವಿರ ಹೆಚ್ಚಿನ ರಾಮೇಶ್ವರ ಭಕ್ತಾದಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು