5:22 PM Tuesday1 - July 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್…

ಇತ್ತೀಚಿನ ಸುದ್ದಿ

ಅಥಣಿ: ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ; ವಿಚಾರ ಸಂಕಿರಣ

03/09/2024, 19:50

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶ್ರೀ ಮುರುಗೇಂದ್ರ ಶಿವಯೋಗಿ ವಿಶ್ವಾಸ ವಿದ್ಯಾಪೀಠ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪಾತ್ರ ವಿಚಾರ ಸಂಕಿರಣ ನಡೆಯಿತು.
ಇದೇ ಸಂದರ್ಭದಲ್ಲಿ ಮಹಾತಪಸ್ವಿ ಮರುಳ ಶಂಕರವರ ಸ್ಮರಣೋತ್ಸವ ಕಾರ್ಯಕ್ರಮ ನಡೆಯಲಾಯಿತು. ಇದರ ಸಾನಿಧ್ಯವನ್ನು ಸಟ್ಟರ ಮಠದ ಪೂಜ್ಯರು ನೆರವೇರಿಸಿ ಶಿಕ್ಷಣ ಮಟ್ಟವು ಇನ್ನೂ ಬೆಳೆಯಬೇಕಾಗಿದೆ ಬಾಹ್ಯವಾಗಿ ಕಲಿತು ಹಲವಾರು ಉನ್ನತ ಹುದ್ದೆಯಲ್ಲಿ ಹೋಗಿರತಕ್ಕಂತ ಜನರನ್ನ ನಾವು ತಿಳಿದುಕೊಂಡಿದ್ದೇವೆ. ಮೈಸೂರಿನ ವಿಶ್ವವಿದ್ಯಾಲಯವು ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿ ತೋರಿಸಿದೆ. ದಕ್ಷಿಣ ಭಾರತದಲ್ಲಿ ಈ ವಿಶ್ವವಿದ್ಯಾಲಯ ಪ್ರಾರಂಭವಾದಾಗಿನಿಂದ ಲಕ್ಷಾಂತರ ಜನರು ಪದವಿ ಪಡೆದುಕೊಂಡು ಅಂತಾರಾಷ್ಟ್ರೀಯ ಮಟ್ಟದವರಿಗೆ ಹೋಗಿರಬಹುದು. ಎಂಜಿ ಸಿಜಿ ಮೆಮೋರಿಯಲ್ ಅಥಣಿ ತಾಲೂಕಿನಲ್ಲಿ ಸಾಕಷ್ಟು ಪ್ರಚಾರ ಮಾಡಿದ್ದು ಒಂದು ವಿಶ್ವವಿದ್ಯಾಲಯಕ್ಕೆ ಹೆಸರು ಪಡೆದುಕೊಳ್ಳುವ ಶಕ್ತಿ ಹೊಂದಿದೆ. ಅದೇ ಮಾದರಿಯಲ್ಲಿ ಮರುಳ ಶಂಕರ ದೇವರನ್ನು ನೆನೆಸಿಕೊಂಡು ಅನುಭವ ದೃಷ್ಟಿಯಲ್ಲಿ ಸಂಸ್ಥೆ ಮತ್ತು ವಿಶ್ವವಿದ್ಯಾಲಯವನ್ನು ಬಾಬುರಾವ್ ಮಹಾರಾಜರು ಹೊನವಾಡ ಪರಶುರಾಮ ಮಹಾರಾಜರು ಅಡಲಟ್ಟಿ ತಮ್ಮ ಅನುಭವದ ಮಾತುಗಳನ್ನಾಡಿದರು. ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಲ್ಲಿಕಾರ್ಜುನ್ ಕನಶೆಟ್ಟಿ ಅವರು ಸಾಹಿತ್ಯ ಮತ್ತು ವಿಶ್ವವಿದ್ಯಾಲಯ ಸಲ್ಲಿಸಿರುವ ಸೇವೆಯನ್ನು ಶ್ಲಾಘಸಿದರು.
ಎಂ.ಸಿ. ಗಂಗಾಧರ ಸ್ವಾಗತಿಸಿದರು. ಡಾ.ಬಸವರಾಜ್ ಮಠ ಇತಿಹಾಸ ಸಂಶೋಧಕರು ಪರ ಗೌಡ ಬಿರಾದರ್ ನಿವ್ರತ ಶಿಕ್ಷಕರು ಹಾಗೂ ಆದರ್ಶ ಶಿಕ್ಷಕರಾದ ಸದಾಶಿವ್ ಹೂ ಟಿ ಮಲ್ಲಿಕಾರ್ಜುನ ವಾಲಿ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ಮುಕ್ತ ವಿವಿ ರ್ಯಾಂಕ್ ವಿಜೇತರನ್ನು ಸನ್ಮಾನಿಸಲಾಯಿತು.


ಪಿಯುಸಿ, ಐಟಿಐ ಮಹಿಳಾ ವಿದ್ಯಾರ್ಥಿನಿಯರನ್ನು ಸಹ ಸನ್ಮಾನಿಸಲಾಯಿತು ಸಾಯಂಕಾಲ ಕಾರ್ಯ ಚಟುವಟಿಕೆಗಳು ಸುಗಮವಾಗಿ ನಡೆದು ಸಂಗೀತ ನಾಟಕ ನೃತ್ಯ ವಿದ್ಯಾರ್ಥಿಗಳು ನೆರವೇರಿಸಿ ಕೊಟ್ಟರು. ಈ ಕಾರ್ಯಕ್ರಮವನ್ನು ಐಟಿಐ ಪ್ರಾಚಾರ್ಯರು ಮಹಿಳಾ ಕೆಎಸ್ಒಯು ವಿಭಾಗದ ಮುಖ್ಯಸ್ಥರು ನೆರವೇರಿಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು