6:59 AM Saturday11 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಕಟೀಲು: 5ರಂದು ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ; ಆಸ್ರಣರಿಗೆ ದುರ್ಗಾಪ್ರಸಾದ, ಪುನರೂರುಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ

03/09/2024, 22:27

ಮಂಗಳೂರು(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ವತಿಯಿಂದ ಸೆ.5ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ
ಹಿರಿಯ ಶಿಕ್ಷಕ, ಸಾಹಿತಿ ಹೊಸಕೋಟೆಯ ಶ್ರೀಕಾಂತ್ ಕೆ.ವಿ. ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಚುಸಾಪ ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಹರಿನಾರಾಯಣ ಆಸ್ರಣರು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ
ಹರಿಕೃಷ್ಣ ಪುನರೂರು ಭಾಗವಹಿಸಲಿದ್ದಾರೆ. ದಿನದ ಕಾರ್ಯಕ್ರಮದಲ್ಲಿ ವಿಚಾರಗೋಷ್ಠಿ , ಕವಿಗೋಷ್ಠಿ, ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮಗಳು ನಡೆಯಲಿವೆ.
*ರಾಜ್ಯ ಗೌರವ ಪುರಸ್ಕಾರ:*
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹರಿನಾರಾಯಣ ಆಸ್ರಣರಿಗೆ ‘ದುರ್ಗಾಪ್ರಸಾದ’ , ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಚುಟುಕು ದಾಸೋಹಿ ಗೌರವ ಪುರಸ್ಕಾರ ನೀಡಲಾಗುವುದು.
ಚುಟುಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಸಾಹಿತಿಗಳು:
ಶಿಕ್ಷಕ ಸಾಹಿತಿಗಳಾದ ವಿ.ಬಿ. ಕುಳಮರ್ವ ಕಾಸರಗೋಡು , ಡಾ. ಸುರೇಶ ನೆಗಳಗುಳಿ ಮಂಗಳೂರು , ಮುನಿರಾಜ ರೆಂಜಾಳ ಮೂಡಬಿದ್ರೆ, ಜಯಾನಂದ ಪೆರಾಜೆ ದಕ್ಷಿಣ ಕನ್ನಡ , ಶಾಂತ ಪುತ್ತೂರು , ಸುಮಲತಾ ಬಿ.ಎಸ್. ಬಾಣಸವಾಡಿ , ಡಾ. ಪ್ರಭುಸ್ವಾಮಿ ಹಾಲಿವಾಡಿ ಮಠ ಹಂಸಭಾವಿ, ವಿದ್ವಾನ್ ರಘುಪತಿ ಭಟ್ ಉಡುಪಿ, ರವಿರಾಜ ತಿರುಮಲೆ ಹಾನಗಲ್ , ರವೀಂದ್ರ ಶೆಟ್ಟಿ ಬಳಂಜ ಅವರಿಗೆ ಚುಟುಕು ಚಿಣ್ಮಯಿ ರಾಜ್ಯ ಶಿಕ್ಷಕ ಸಾಹಿತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು