3:15 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೆಲರಾಯ್ ಯಲ್ಲಿ ‘ಗಾದ್ಯಾಂತ್ ಗಮ್ಮತ್’: ಕೃಷಿಕ ಜ್ಯೂಡ್ ಕರ್ನೆಲಿಯೊ ಅವರಿಗೆ ಸನ್ಮಾನ

03/09/2024, 23:24

ಮಂಗಳೂರು(reporterkarnataka.com): ಸಂತ ಅನ್ನಾ ಚರ್ಚ್ ಕೆಲರಾಯ್, ಇಲ್ಲಿನ ‘ಭಾರತೀಯ ಕಥೋಲಿಕ್ ಯುವ ಸಂಚಾಲನ’ವು ಭಾನುವಾರ ‘ಗಾದ್ಯಾಂತ್ ಗಮ್ಮತ್’ (ಗದ್ದೆಯಲ್ಲಿ ಗಮ್ಮತ್) ಎಂಬ ಕಾರ್ಯಕ್ರಮವನ್ನು ಕೆಲರಾಯ್ ತಾರಿಗುಡ್ಡೆ ಗದ್ದೆಯಲ್ಲಿ ಆಯೋಜಿಸಿತ್ತು.


ಬೆಳಿಗ್ಗೆ 9.30 ಗಂಟೆಗೆ ಸಂತ ಅನ್ನಾ ದೇವಾಲಯದ ಧರ್ಮಗುರುಗಳಾದ ಫಾ| ಸಿಲ್ವೆಸ್ಟರ್ ಡಿಕೋಸ್ಟಾರವರು ಆಶೀರ್ವಚನದ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಐಸಿವೈಎಮ್ ಸಚೇತಕರಾದ ವಿನೋದ್ ಪಿರೇರಾ, ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಂತೋಷ್ ಡಿಕೋಸ್ಟಾ, ಕಾರ್ಯದರ್ಶಿ ಸೆಲಿನ್ ಡಿಮೆಲ್ಲೊ, ಫಾ| ರೋಶನ್ ಫೆರ್ನಾಂಡಿಸ್, ಕಾರ್ಪರೇಟರ್ ರಘು ಸಾಲಿಯಾನ್, ಜಯಂತಿ ದೇವಸ ಮುಂತಾದ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಪಿಂಗಾರ ಅರಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ವಧರ್ಮಗಳ ಸಹಕಾರದಿಂದ ಈ ಕಾರ್ಯಕ್ರಮಕ್ಕೆ ಕಳೆಬಂದಿತ್ತು.
ಅನೇಕ ವರ್ಷಗಳಿಂದ ತೆನೆಹಬ್ಬಕ್ಕೆ ತೆನೆಯನ್ನು ದಾನ ಮಾಡುತ್ತಿರುವ ಕೃಷಿಕ ಜ್ಯೂಡ್ ಕರ್ನೆಲಿಯೊ ಇವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ‘ಪೆಪ್ಸಿ ಲಕ್ಕಿ ಡ್ರಾ’ದಲ್ಲಿ ಅನೇಕರು ಭಾಗವಹಿಸಿ ಬಹುಮಾನ ಗೆದ್ದರು. ಸರ್ವರಿಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಸ್ಪರ್ಧೆಗಳನ್ನು ಬೆಳಿಗ್ಗೆ 10ರಿಂದ ಸಂಜೆ 5 ರ ತನಕ ನಡೆಸಿ, ಸಂಜೆಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಬಂದಂತಹ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮನೀಶಾ ಡಿಸೋಜಾ ಸ್ವಾಗತಿಸಿ, ಅಲಿಷಾ ಕ್ರಾಸ್ತಾ ಧನ್ಯವಾದ ಸಮರ್ಪಣೆ ಗೈದರು.
ಕಾರ್ಯಕ್ರಮವನ್ನು ಸಂತೋಷ್ ಡಿಕೋಸ್ಟಾ ಹಾಗೂ ಬೆನೊಯ್ ಡಿಸೋಜಾ ನಡೆಸಿಕೊಟ್ಟರು. ಸಣ್ಣ ಮಕ್ಕಳಿಂದ ಹಿಡಿದು ವೃಯೋವೃದ್ಧರವರೆಗೆ ಎಲ್ಲರೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಕೆಸರಿನ ಗದ್ದೆಯಲ್ಲಿ ಆನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು