1:41 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ  ಟೀಕೆ

20/05/2021, 20:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ  ಟೀಕಿಸಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ  ಪ್ಯಾಕೇಜ್ ಘೋಷಿಸಲಾಗಿದ್ದು, ಈ ರೀತಿಯ ಅವೈಜ್ಞಾನಿಕ ಪ್ಯಾಕೇಜ್ ನೀಡುವುದು ಸರಿಯಲ್ಲ. ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದರಿಂದ ಎಲ್ಲ ಜನರಿಗೂ ಈ ಪ್ಯಾಕೇಜ್ ತಲುಪುವಂತಾಗಬೇಕು.

ಜಾತಿ ಮತ್ತು ವೃತ್ತಿಯನ್ನು ಗುರುತಿಸಲಾರದೆ ಕೇವಲ ಬಡತನ ರೇಖೆ ಎಂದು ಆಧರಿಸಿ ರೇಷನ್ ಕಾರ್ಡ್ ಮುಖಾಂತರ ಪರಿಹಾರ ನೀಡುವುದರಿಂದ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಹ ಈ ಪ್ಯಾಕೇಜ್ ಮೂಡುವಂತಾಗಬೇಕು. ಕೇವಲ ಜಾತಿ ಹಾಗೂ ವೃತ್ತಿಗಳನ್ನು ಆಧರಿಸಿ ಇರುವುದರಿಂದ ಹಲವಾರು ವೃತ್ತಿಯನ್ನು ಮಾಡುವ ಜನರಿಗೆ ದೊರೆಯುವುದಿಲ್ಲ . ಈ ಕೂಡಲೇ ಎಚ್ಚೆತ್ತುಕೊಂಡು  ಜನರಿಗೆ ಪ್ಯಾಕೇಜ್ ನೀಡಬೇಕು ಮತ್ತು ಸರಕಾರ ಪತ್ರಕರ್ತರನ್ನು ಫ್ರಂಟ್ಲೈನ್ ವಾರಿಯರ್ ಎಂದು ಎಂದು ಗುರುತಿಸಿದರು ಸಹ ಅವರಿಗೆ ಯಾವುದೇ ರೀತಿಯ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಇದು ಸರಕಾರದ ಒಂದು ನಿರ್ಲಕ್ಷದ ಧೋರಣೆಯಾಗಿದೆ. ಈ ಕೂಡಲೇ ಪತ್ರಕರ್ತರಿಗೂ ಸಹ ಒಂದು ವಿಶೇಷವಾದ ಪ್ಯಾಕೇಜ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು