6:15 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ  ಟೀಕೆ

20/05/2021, 20:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ  ಟೀಕಿಸಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ  ಪ್ಯಾಕೇಜ್ ಘೋಷಿಸಲಾಗಿದ್ದು, ಈ ರೀತಿಯ ಅವೈಜ್ಞಾನಿಕ ಪ್ಯಾಕೇಜ್ ನೀಡುವುದು ಸರಿಯಲ್ಲ. ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದರಿಂದ ಎಲ್ಲ ಜನರಿಗೂ ಈ ಪ್ಯಾಕೇಜ್ ತಲುಪುವಂತಾಗಬೇಕು.

ಜಾತಿ ಮತ್ತು ವೃತ್ತಿಯನ್ನು ಗುರುತಿಸಲಾರದೆ ಕೇವಲ ಬಡತನ ರೇಖೆ ಎಂದು ಆಧರಿಸಿ ರೇಷನ್ ಕಾರ್ಡ್ ಮುಖಾಂತರ ಪರಿಹಾರ ನೀಡುವುದರಿಂದ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಹ ಈ ಪ್ಯಾಕೇಜ್ ಮೂಡುವಂತಾಗಬೇಕು. ಕೇವಲ ಜಾತಿ ಹಾಗೂ ವೃತ್ತಿಗಳನ್ನು ಆಧರಿಸಿ ಇರುವುದರಿಂದ ಹಲವಾರು ವೃತ್ತಿಯನ್ನು ಮಾಡುವ ಜನರಿಗೆ ದೊರೆಯುವುದಿಲ್ಲ . ಈ ಕೂಡಲೇ ಎಚ್ಚೆತ್ತುಕೊಂಡು  ಜನರಿಗೆ ಪ್ಯಾಕೇಜ್ ನೀಡಬೇಕು ಮತ್ತು ಸರಕಾರ ಪತ್ರಕರ್ತರನ್ನು ಫ್ರಂಟ್ಲೈನ್ ವಾರಿಯರ್ ಎಂದು ಎಂದು ಗುರುತಿಸಿದರು ಸಹ ಅವರಿಗೆ ಯಾವುದೇ ರೀತಿಯ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಇದು ಸರಕಾರದ ಒಂದು ನಿರ್ಲಕ್ಷದ ಧೋರಣೆಯಾಗಿದೆ. ಈ ಕೂಡಲೇ ಪತ್ರಕರ್ತರಿಗೂ ಸಹ ಒಂದು ವಿಶೇಷವಾದ ಪ್ಯಾಕೇಜ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು