3:49 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ  ಟೀಕೆ

20/05/2021, 20:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ  ಟೀಕಿಸಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ  ಪ್ಯಾಕೇಜ್ ಘೋಷಿಸಲಾಗಿದ್ದು, ಈ ರೀತಿಯ ಅವೈಜ್ಞಾನಿಕ ಪ್ಯಾಕೇಜ್ ನೀಡುವುದು ಸರಿಯಲ್ಲ. ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದರಿಂದ ಎಲ್ಲ ಜನರಿಗೂ ಈ ಪ್ಯಾಕೇಜ್ ತಲುಪುವಂತಾಗಬೇಕು.

ಜಾತಿ ಮತ್ತು ವೃತ್ತಿಯನ್ನು ಗುರುತಿಸಲಾರದೆ ಕೇವಲ ಬಡತನ ರೇಖೆ ಎಂದು ಆಧರಿಸಿ ರೇಷನ್ ಕಾರ್ಡ್ ಮುಖಾಂತರ ಪರಿಹಾರ ನೀಡುವುದರಿಂದ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಹ ಈ ಪ್ಯಾಕೇಜ್ ಮೂಡುವಂತಾಗಬೇಕು. ಕೇವಲ ಜಾತಿ ಹಾಗೂ ವೃತ್ತಿಗಳನ್ನು ಆಧರಿಸಿ ಇರುವುದರಿಂದ ಹಲವಾರು ವೃತ್ತಿಯನ್ನು ಮಾಡುವ ಜನರಿಗೆ ದೊರೆಯುವುದಿಲ್ಲ . ಈ ಕೂಡಲೇ ಎಚ್ಚೆತ್ತುಕೊಂಡು  ಜನರಿಗೆ ಪ್ಯಾಕೇಜ್ ನೀಡಬೇಕು ಮತ್ತು ಸರಕಾರ ಪತ್ರಕರ್ತರನ್ನು ಫ್ರಂಟ್ಲೈನ್ ವಾರಿಯರ್ ಎಂದು ಎಂದು ಗುರುತಿಸಿದರು ಸಹ ಅವರಿಗೆ ಯಾವುದೇ ರೀತಿಯ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಇದು ಸರಕಾರದ ಒಂದು ನಿರ್ಲಕ್ಷದ ಧೋರಣೆಯಾಗಿದೆ. ಈ ಕೂಡಲೇ ಪತ್ರಕರ್ತರಿಗೂ ಸಹ ಒಂದು ವಿಶೇಷವಾದ ಪ್ಯಾಕೇಜ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು