3:50 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ  ಟೀಕೆ

20/05/2021, 20:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ  ಟೀಕಿಸಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ  ಪ್ಯಾಕೇಜ್ ಘೋಷಿಸಲಾಗಿದ್ದು, ಈ ರೀತಿಯ ಅವೈಜ್ಞಾನಿಕ ಪ್ಯಾಕೇಜ್ ನೀಡುವುದು ಸರಿಯಲ್ಲ. ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದರಿಂದ ಎಲ್ಲ ಜನರಿಗೂ ಈ ಪ್ಯಾಕೇಜ್ ತಲುಪುವಂತಾಗಬೇಕು.

ಜಾತಿ ಮತ್ತು ವೃತ್ತಿಯನ್ನು ಗುರುತಿಸಲಾರದೆ ಕೇವಲ ಬಡತನ ರೇಖೆ ಎಂದು ಆಧರಿಸಿ ರೇಷನ್ ಕಾರ್ಡ್ ಮುಖಾಂತರ ಪರಿಹಾರ ನೀಡುವುದರಿಂದ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಹ ಈ ಪ್ಯಾಕೇಜ್ ಮೂಡುವಂತಾಗಬೇಕು. ಕೇವಲ ಜಾತಿ ಹಾಗೂ ವೃತ್ತಿಗಳನ್ನು ಆಧರಿಸಿ ಇರುವುದರಿಂದ ಹಲವಾರು ವೃತ್ತಿಯನ್ನು ಮಾಡುವ ಜನರಿಗೆ ದೊರೆಯುವುದಿಲ್ಲ . ಈ ಕೂಡಲೇ ಎಚ್ಚೆತ್ತುಕೊಂಡು  ಜನರಿಗೆ ಪ್ಯಾಕೇಜ್ ನೀಡಬೇಕು ಮತ್ತು ಸರಕಾರ ಪತ್ರಕರ್ತರನ್ನು ಫ್ರಂಟ್ಲೈನ್ ವಾರಿಯರ್ ಎಂದು ಎಂದು ಗುರುತಿಸಿದರು ಸಹ ಅವರಿಗೆ ಯಾವುದೇ ರೀತಿಯ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಇದು ಸರಕಾರದ ಒಂದು ನಿರ್ಲಕ್ಷದ ಧೋರಣೆಯಾಗಿದೆ. ಈ ಕೂಡಲೇ ಪತ್ರಕರ್ತರಿಗೂ ಸಹ ಒಂದು ವಿಶೇಷವಾದ ಪ್ಯಾಕೇಜ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು