5:02 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕ: ಅಥಣಿಯ ವಕೀಲ ಗೌತಮ್ ಬನಸೋಡೆ  ಟೀಕೆ

20/05/2021, 20:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಸರಕಾರ ಘೋಷಿಸಿದ ಪ್ಯಾಕೇಜ್ ಅವೈಜ್ಞಾನಿಕವೆಂದು ಅಥಣಿಯ ವಕೀಲ ಡಾ. ಗೌತಮ್ ಬನಸೋಡೆ  ಟೀಕಿಸಿದ್ದಾರೆ.

ತಮ್ಮ ಸ್ವಗೃಹದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಡಾ ಗೌತಮ್ ಬನಸೋಡೆ ಅವರು ಕೇವಲ ಧರ್ಮ , ವೃತ್ತಿ, ಆಧರಿಸಿ  ಪ್ಯಾಕೇಜ್ ಘೋಷಿಸಲಾಗಿದ್ದು, ಈ ರೀತಿಯ ಅವೈಜ್ಞಾನಿಕ ಪ್ಯಾಕೇಜ್ ನೀಡುವುದು ಸರಿಯಲ್ಲ. ಈಗಾಗಲೇ ರಾಜ್ಯದಲ್ಲಿ ಹಲವಾರು ಜನರು ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುವುದರಿಂದ ಎಲ್ಲ ಜನರಿಗೂ ಈ ಪ್ಯಾಕೇಜ್ ತಲುಪುವಂತಾಗಬೇಕು.

ಜಾತಿ ಮತ್ತು ವೃತ್ತಿಯನ್ನು ಗುರುತಿಸಲಾರದೆ ಕೇವಲ ಬಡತನ ರೇಖೆ ಎಂದು ಆಧರಿಸಿ ರೇಷನ್ ಕಾರ್ಡ್ ಮುಖಾಂತರ ಪರಿಹಾರ ನೀಡುವುದರಿಂದ ಸಮಾಜದ ಕಟ್ಟಕಡೆ ವ್ಯಕ್ತಿಗೂ ಸಹ ಈ ಪ್ಯಾಕೇಜ್ ಮೂಡುವಂತಾಗಬೇಕು. ಕೇವಲ ಜಾತಿ ಹಾಗೂ ವೃತ್ತಿಗಳನ್ನು ಆಧರಿಸಿ ಇರುವುದರಿಂದ ಹಲವಾರು ವೃತ್ತಿಯನ್ನು ಮಾಡುವ ಜನರಿಗೆ ದೊರೆಯುವುದಿಲ್ಲ . ಈ ಕೂಡಲೇ ಎಚ್ಚೆತ್ತುಕೊಂಡು  ಜನರಿಗೆ ಪ್ಯಾಕೇಜ್ ನೀಡಬೇಕು ಮತ್ತು ಸರಕಾರ ಪತ್ರಕರ್ತರನ್ನು ಫ್ರಂಟ್ಲೈನ್ ವಾರಿಯರ್ ಎಂದು ಎಂದು ಗುರುತಿಸಿದರು ಸಹ ಅವರಿಗೆ ಯಾವುದೇ ರೀತಿಯ ಪ್ಯಾಕೇಜ್ ಘೋಷಣೆ ಮಾಡಿಲ್ಲ. ಇದು ಸರಕಾರದ ಒಂದು ನಿರ್ಲಕ್ಷದ ಧೋರಣೆಯಾಗಿದೆ. ಈ ಕೂಡಲೇ ಪತ್ರಕರ್ತರಿಗೂ ಸಹ ಒಂದು ವಿಶೇಷವಾದ ಪ್ಯಾಕೇಜ್ ನೀಡಬೇಕೆಂದು ರಾಜ್ಯ ಸರಕಾರಕ್ಕೆ ಮನವಿ ಮಾಡಿದರು. 

ಇತ್ತೀಚಿನ ಸುದ್ದಿ

ಜಾಹೀರಾತು