8:31 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ

04/09/2024, 21:36

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರಿ ಮಳೆಯಿಂದ ತೀರ್ಥಹಳ್ಳಿ ತಾಲೂಕಿನಲ್ಲಿ ಗುಡ್ಡ ಕುಸಿತ ಪ್ರಕರಣಗಳುರಾಜ್ಯಾದ್ಯಂತ ಭಾರೀ ಸದ್ದು ಮಾಡುತ್ತಿರುವನಡುವೆ ಮತ್ತೊಂದು ಗುಡ್ಡ ಕುಸಿದಿದೆ.

ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ ಬೈಲು ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಭಾರೀ ಶಬ್ದದಿಂದ ಗುಡ್ಡ ಕುಸಿದ ಬಗ್ಗೆ ಸ್ಥಳೀಯರು ಹೇಳಿದ್ದಾರೆ. ಸುತ್ತಮುತ್ತಲೂ ಗದ್ದೆ, ತೋಟ, ಹಾಗೂ ವಾಸದ ಮನೆ ಇಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ತೀರ್ಥಹಳ್ಳಿ- ಆಗುಂಬೆ ರಾಷ್ಟ್ರೀಯ ಹೆದ್ದಾರಿ ಮಾರ್ಗ ಮಧ್ಯೆ ಇರುವ ಬಿಳಚಿಕಟ್ಟೆಯಿಂದ ಗುಡ್ಡ ಜರಿತವನ್ನು ವೀಕ್ಷಿಸಬಹುದು. ಕಲ್ಲು
ಬಂಡೆಯ ಮೇಲೆ ಇದ್ದ ಮಣ್ಣು, ಗಿಡ ಮರಗಳು ಅಂದಾಜು 50 ಅಡಿ ಕುಸಿದಿವೆ. ಸುತ್ತಮುತ್ತ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ.ಅತಿಯಾದಮಳೆಯಿಂದ ಗುಡ್ಡ ಕುಸಿದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು