5:25 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು ಸ್ಥಳದಲ್ಲೇ ಸಾವು

04/09/2024, 21:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸಮೀಪದ ಹೊದಲದ ಕೌದಳ್ಳಿ ಬಳಿಯ ಹೊಸಗದ್ದೆಯ ಯುವಕನೋರ್ವ ವಾಹನ ಚಾಲನೆ ಮಾಡುವಾಗ ರಸ್ತೆಯಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ಸಂತೋಷ (34 ) ಮೃತ ಪಟ್ಟ ದುರ್ದೈವಿ. ಇಂದು ಮಧ್ಯಾಹ್ನದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಸ್ಕೂಟಿಯಲ್ಲಿಯೇ ಹೊರಟು ಹೊದಲದ ಅಂಗಡಿಯೊಂದರ ಬಳಿ ಬಂದು ಕುಳಿತಿದ್ದಾರೆ. ನಂತರ ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ಹೊರಟಿದ್ದಾರೆ.
ವಡ್ಡಿನಬೈಲು ಸಮೀಪ ಬರುವ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸ್ಕೂಟಿಯೂ ಸಹ ಅವರ ಮೇಲೆ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರ ಪತ್ನಿ ಬಾಣಂತಿಯಾಗಿದ್ದು ಮೂರು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಡೆಸಲಾಗುತ್ತಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು