5:37 PM Wednesday18 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು ಸ್ಥಳದಲ್ಲೇ ಸಾವು

04/09/2024, 21:56

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಸಮೀಪದ ಹೊದಲದ ಕೌದಳ್ಳಿ ಬಳಿಯ ಹೊಸಗದ್ದೆಯ ಯುವಕನೋರ್ವ ವಾಹನ ಚಾಲನೆ ಮಾಡುವಾಗ ರಸ್ತೆಯಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ.
ಸಂತೋಷ (34 ) ಮೃತ ಪಟ್ಟ ದುರ್ದೈವಿ. ಇಂದು ಮಧ್ಯಾಹ್ನದ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಸ್ಕೂಟಿಯಲ್ಲಿಯೇ ಹೊರಟು ಹೊದಲದ ಅಂಗಡಿಯೊಂದರ ಬಳಿ ಬಂದು ಕುಳಿತಿದ್ದಾರೆ. ನಂತರ ಅಲ್ಲಿಂದ ತೀರ್ಥಹಳ್ಳಿ ಆಸ್ಪತ್ರೆಗೆ ಹೊರಟಿದ್ದಾರೆ.
ವಡ್ಡಿನಬೈಲು ಸಮೀಪ ಬರುವ ವೇಳೆ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಸ್ಕೂಟಿಯೂ ಸಹ ಅವರ ಮೇಲೆ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅವರ ಪತ್ನಿ ಬಾಣಂತಿಯಾಗಿದ್ದು ಮೂರು ತಿಂಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಡೆಸಲಾಗುತ್ತಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು