2:16 AM Saturday16 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳಿಂದ ಕೋವಿಡ್ ಜಾಗೃತಿ: ಮಾಸ್ಕ್ ಧರಿಸದವರಿಗೆ ದಂಡ

28/08/2021, 20:04

ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಮಾಸ್ಕ್ ಹಾಕದವರಿಗೆ ದಂಡ ವಿಧಿಸಿ ಸಾರ್ವಜನಿಕರಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು.

ಆಗಸ್ಟ್ 27ರಂದು ಪಟ್ಟಣದ ಮದಕರಿ ವೃತ್ತದಲ್ಲಿ ಪಪಂ ಅಧಿಕಾರಿ ಈರಮ್ಮ ನೇತೃತ್ವದಲ್ಲಿ,ಪಪಂ ಸಿಬ್ಬಂದಿ ಕೋವಿಡ್ ಸೋಂಕಿನ ಕುರಿತು ಜಾಗ್ರತೆ ಮೂಡಿಸಿದರು. ಮಾಸ್ಕ್ ಧರಿಸದೇ  ನಿಯಮ ಮೀರಿ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಹಾಗೂ ಬೈಕ್ ಸೇರಿದಂತೆ, ಇತರೆ ವಾಹನಗಳಲ್ಲಿ ತೆರಳುವವರಿಗೆ ನಿಗದಿತ ದಂಡ ವಿಧಿಸಲಾಯಿತು.ಈ ಸಂದರ್ಭದಲ್ಲಿ ಕೆಲ ನಾಗರೀಕರು ಮಾತನಾಡಿ ದಂಡ ವಿಧಿಸುವುದರೊಂದಿಗೆ, ಪಪಂ ದಂಡದ ರಸೀದಿಯೊಂದಿಗೆ ಮಾಸ್ಕ್ ವಿತರಿಸುವ ಮೂಲಕ ಜಾಗ್ರತೆ ಮೂಡಿಸಬಹುದಾಗಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಾಲ್ಮೀಕಿ ಯುವ ಮುಖಂಡ ಕಾರ್ಪೆಂಟರ್ ಮೂಗಣ್ಣ, ಪಪಂ ಸದಸ್ಯ ಶಿವಪ್ಪ ನಾಯಕ ಉಪಸ್ಥಿತರಿದ್ದರು.

ಪಪಂ ಸಿಬ್ಬಂದಿಗಳಾದ ಪೌರ ಕಾರ್ಮಿಕರಾದ ಮೇಸ್ತ್ರಿ ಪರಶುರಾಮಪ್ಪ, ರಮೇಶ, ರಾಜಾಭಕ್ಷಿ, ಮುನೀರ್, ಧನುಂಜಯ್, ಹನುಮಂತಪ್ಪ  ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು