7:12 AM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಕಚೇರಿ ಬಳಿ ಕಸ ಚೀಲವಿಟ್ಟ ಭೂಪ: ಗ್ರಾಮಸ್ಥರ ಆಕ್ರೋಶ

05/09/2024, 15:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನ ಸಮಯಕ್ಕೆ ಸರಿಯಾಗಿ ಬಂದಿಲ್ಲವೆಂದು ಮನೆಯ ಕಸವನ್ನು ಗ್ರಾಮ ಪಂಚಾಯತ್ ಬಾಗಿಲ ಬಳಿ ಇಟ್ಟ ಘಟನೆ ಬಣಕಲ್ ಗ್ರಾಮ ಪಂಚಾಯತ್ ಯಲ್ಲಿ ನಡೆದಿದೆ.


ಗ್ರಾಮ ಪಂಚಾಯಿತಿಯ ವಾಹನ ದಿನಕ್ಕೆ ಎರಡು ಬಾರಿ ಬರುತ್ತಿದ್ದು ಮನೆ ಮಾಲೀಕರು ವಾಹನ ಬಂದ ಸಮಯಕ್ಕೆ ಸರಿಯಾಗಿ ಬಾರದೆ ಈ ರೀತಿ ಕೃತ್ಯ ವ್ಯಸಗಿದ್ದಾರೆವೆಂದು ಸಮಾಜ ಸೇವಕ ಆರಿಫ್ ಆರೋಪಿಸಿದ್ದಾರೆ. ಬಣಕಲ್ ಗ್ರಾಮ ಪಂಚಾಯಿತಿಯ ಕಸ ವಿಲೇವಾರಿ ವಾಹನಕ್ಕೆ ಚಾಲಕರಿಲ್ಲದೆ ಸಮಾಜ ಸೇವಕ ಆರೀಫ್ ಅವರೇ ಸಮಾಜ ಸೇವೆಯ ದೃಷ್ಟಿಯಿಂದ ಕಸ ವಿಲೇವಾರಿ ವಾಹನವನ್ನು ಚಲಾಯಿಸುತ್ತಿದ್ದು ಇವರು ದಿನಕ್ಕೆ ಎರಡು ಬಾರಿ ಬಂದರು ಈ ವ್ಯಕ್ತಿ ಮಾತ್ರ ಈ ರೀತಿ ಮಾಡಿರುವುದು ಗ್ರಾಮಸ್ಥರಿಲ್ಲರಿಗೂ ಬೇಸರ ತರಿಸಿದೆ ಎಂದು ಗ್ರಾಮಸ್ಥರಾದ ಗಂಗು ಅಸಮಾಧಾನ ಹೊರಹಾಕಿದರು. ಆರೀಫ್ ಅವರಿಗೆ ಫೋನ್ ಮಾಡಿ ಹೇಳಿದ್ದರೆ ಮರುದಿನ ಕಸವನ್ನು ಅವರು ತೆಗೆದುಕೊಂಡು ಹೋಗುತ್ತಿದ್ದರು. ಈ ರೀತಿ ಮಾಡಿರುವುದು ಸರಿಯಲ್ಲ ಎಂದರು.
ಕಸದ ಚೀಲವಿಟ್ಟ ಮಣಿಕಂಠ ಮಾತಾಡಿ, ನಮ್ಮ ಮನೆ ಸಮೀಪ ಕಸ ವಿಲೇವಾರಿ ವಾಹನ ನಿಲ್ಲಿಸದೆ ಹೋಗಿದ್ದರಿಂದ ನಾನು ಗ್ರಾಮ ಪಂಚಾಯತ್ ಎದುರಿಗೆ ಕಸವನ್ನು ಹಾಕಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು