7:22 PM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ…

ಇತ್ತೀಚಿನ ಸುದ್ದಿ

ನಾಣ್ಯಾಪುರ: ಸೂಲಗಿತ್ತಿ ಪುರಕಲ್ ದುರುಗಮ್ಮ ಹಾಗೂ ನಾಟಿ ವೈದ್ಯ ಗೊಲ್ಲರ ಚೆನ್ನಜ್ಜರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಸನ್ಮಾನ

28/08/2021, 20:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ನಾಣ್ಯಾಪುರ ಗ್ರಾಮದಲ್ಲಿ, ಹಲವು ದಶಕಗಳಿಂದ ನಿರಂತರವಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹಿರಿಯರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಅವರ ಜೀವಮಾನದ ಸಮಾಜ ಸೇವೆಯನ್ನು

ಪರಿಗಣಿಸಿ, ಅವರನ್ನು ಅಭಿನಂದಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಿತು.
ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಮಾತನಾಡಿ, 85 ವಸಂತಗಳನ್ನು ಕಂಡಿರುವ ಗ್ರಾಮದ ಹಿರಿಯಜ್ಜಿ ನಾಣ್ಯಾಪುರ ಗ್ರಾಮದ ಪುರಕಲ್ ದುರುಗಮ್ಮ,ತನ್ನ ಆರು ದಶಕಗಳನ್ನು ಉಚಿತವಾಗಿ ಸೂಲಗಿತ್ತಿ ಸೇವಕಿಯಾಗಿ ಸಮಾಜ ಸೇವೆಯಿಂದ ಗರುತಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

65 ವರ್ಷಗಳನ್ನು ಕಂಡಿರುವ ಗೊಲ್ಲರ ಚೆನ್ನಜ್ಜ ಮೂಲತಃ ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ ಯವರಾಗಿದ್ದು, ಇವರು ಕೆಲ ವರ್ಷಗಳಿಂದ ನಾಣ್ಯಾಪುರ ಗ್ರಾಮದಲ್ಲಿ ನೆಲೆಸಿದ್ದಾರೆ. ಇವರು ತಮ್ಮ ಬಹುತೇಕ ಆಯುಷ್ಯವನ್ನು ಉಚಿತ ನಾಟಿ ವೈದ್ಯ ಚಿಕಿತ್ಸೆಗಾಗಿ ಮೀಸಲಿರಿಸಿಕೊಂಡಿದ್ದಾರೆ. ಹತ್ತಾರು  ಗಂಭೀರ ಕಾಯಿಲೆಗಳು ಸೇರಿದಂತೆ ನೂರಾರು ಖಾಯಿಲೆಗಳಿಗೆ ಉಚಿತವಾಗಿ ನಾಟಿ ಔಷಧಿ ನೀಡುತ್ತಿದ್ದಾರೆ. ಇವರಿಬ್ಬರೂ ನಾಣ್ಯಾಪುರ ಗ್ರಾಮದ ಬೆಲೆ ಕಟ್ಟದಂತಹ ಆಸ್ಥಿಯಾಗಿದ್ದಾರೆ ಎಂದು ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ನುಡಿದರು.

ಅವರಿಬ್ಬರಿಗೆ ವೇದಿಕೆ ವತಿಯಿಂದ ಜಿಲ್ಲಾಮಟ್ಟದ ಪ್ರಶಸ್ತಿ ನೀಡಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ವಂದೇ  ಮಾತರಂ ಜಾಗೃತಿ ವೇದಿಕೆ ಮುಖಂಡ ಹಾಗೂ ಗ್ರಾಮದ ವಾಲ್ಮೀಕಿ ಯುವ ಮುಖಂಡ ದಿಬ್ಬದಳ್ಳಿ ಮಲ್ಲಪ್ಪ ಸೇರಿದಂತೆ ಗ್ರಾಮದ ಹಿರಿಯರು ಮತ್ತು ಮಹಿಳೆಯರು ವಿವಿದ ಸಂಘ ಸಂಸ್ಥೆ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು