4:00 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ನಾಣ್ಯಾಪುರ: ಸೂಲಗಿತ್ತಿ ಪುರಕಲ್ ದುರುಗಮ್ಮ ಹಾಗೂ ನಾಟಿ ವೈದ್ಯ ಗೊಲ್ಲರ ಚೆನ್ನಜ್ಜರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಸನ್ಮಾನ

28/08/2021, 20:13

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ನಾಣ್ಯಾಪುರ ಗ್ರಾಮದಲ್ಲಿ, ಹಲವು ದಶಕಗಳಿಂದ ನಿರಂತರವಾಗಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಹಿರಿಯರಿಗೆ ವಂದೇ ಮಾತರಂ ಜಾಗೃತಿ ವೇದಿಕೆ ಅವರ ಜೀವಮಾನದ ಸಮಾಜ ಸೇವೆಯನ್ನು

ಪರಿಗಣಿಸಿ, ಅವರನ್ನು ಅಭಿನಂದಿಸಿ ಪ್ರಶಸ್ತಿ ಪತ್ರ ನೀಡಿ ಗೌರವಿಸಿತು.
ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಮಾತನಾಡಿ, 85 ವಸಂತಗಳನ್ನು ಕಂಡಿರುವ ಗ್ರಾಮದ ಹಿರಿಯಜ್ಜಿ ನಾಣ್ಯಾಪುರ ಗ್ರಾಮದ ಪುರಕಲ್ ದುರುಗಮ್ಮ,ತನ್ನ ಆರು ದಶಕಗಳನ್ನು ಉಚಿತವಾಗಿ ಸೂಲಗಿತ್ತಿ ಸೇವಕಿಯಾಗಿ ಸಮಾಜ ಸೇವೆಯಿಂದ ಗರುತಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.

65 ವರ್ಷಗಳನ್ನು ಕಂಡಿರುವ ಗೊಲ್ಲರ ಚೆನ್ನಜ್ಜ ಮೂಲತಃ ಕೂಡ್ಲಿಗಿ ತಾಲೂಕಿನ ಶಿವಪುರ ಗೊಲ್ಲರಹಟ್ಟಿ ಯವರಾಗಿದ್ದು, ಇವರು ಕೆಲ ವರ್ಷಗಳಿಂದ ನಾಣ್ಯಾಪುರ ಗ್ರಾಮದಲ್ಲಿ ನೆಲೆಸಿದ್ದಾರೆ. ಇವರು ತಮ್ಮ ಬಹುತೇಕ ಆಯುಷ್ಯವನ್ನು ಉಚಿತ ನಾಟಿ ವೈದ್ಯ ಚಿಕಿತ್ಸೆಗಾಗಿ ಮೀಸಲಿರಿಸಿಕೊಂಡಿದ್ದಾರೆ. ಹತ್ತಾರು  ಗಂಭೀರ ಕಾಯಿಲೆಗಳು ಸೇರಿದಂತೆ ನೂರಾರು ಖಾಯಿಲೆಗಳಿಗೆ ಉಚಿತವಾಗಿ ನಾಟಿ ಔಷಧಿ ನೀಡುತ್ತಿದ್ದಾರೆ. ಇವರಿಬ್ಬರೂ ನಾಣ್ಯಾಪುರ ಗ್ರಾಮದ ಬೆಲೆ ಕಟ್ಟದಂತಹ ಆಸ್ಥಿಯಾಗಿದ್ದಾರೆ ಎಂದು ವೇದಿಕೆ ಅಧ್ಯಕ್ಷ ವಿ.ಜಿ.ವೃಷಭೇಂದ್ರ ನುಡಿದರು.

ಅವರಿಬ್ಬರಿಗೆ ವೇದಿಕೆ ವತಿಯಿಂದ ಜಿಲ್ಲಾಮಟ್ಟದ ಪ್ರಶಸ್ತಿ ನೀಡಿ ವೇದಿಕೆ ಜಿಲ್ಲಾಧ್ಯಕ್ಷ ವಿ.ಜಿ.ವೃಷಭೇಂದ್ರ ಸನ್ಮಾನ ಮಾಡಿದರು.

ಈ ಸಂದರ್ಭದಲ್ಲಿ ವಂದೇ  ಮಾತರಂ ಜಾಗೃತಿ ವೇದಿಕೆ ಮುಖಂಡ ಹಾಗೂ ಗ್ರಾಮದ ವಾಲ್ಮೀಕಿ ಯುವ ಮುಖಂಡ ದಿಬ್ಬದಳ್ಳಿ ಮಲ್ಲಪ್ಪ ಸೇರಿದಂತೆ ಗ್ರಾಮದ ಹಿರಿಯರು ಮತ್ತು ಮಹಿಳೆಯರು ವಿವಿದ ಸಂಘ ಸಂಸ್ಥೆ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು