9:55 AM Wednesday10 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಅಕ್ರಮ ಸಂಬಂಧ: ಮಚ್ಚಿನಿಂದ ಕೊಚ್ಚಿ ನಡು ವಯಸ್ಕನ ಭೀಕರ ಕೊಲೆ; ಆರೋಪಿ ಪರಾರಿ

06/09/2024, 20:00

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹುಣಸನಾಳು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಂಗಸ್ವಾಮಿ (42) ಕೊಲೆಯಾದ ವ್ಯಕ್ತಿ. ಆರೋಪಿ ಮಹದೇವ ಶೆಟ್ಟಿ (45) ಪರಾರಿಯಾಗಿದ್ದಾನೆ.
ಮಹದೇವ ಶೆಟ್ಟಿ ಪತ್ನಿ ಜೊತೆ ರಂಗಸ್ವಾಮಿ ಅಕ್ರಮ ಸಂಬಂಧ ಹೊಂದಿದ್ದ ವಿಚಾರವಾಗಿ ರಂಗಸ್ವಾಮಿ ಮತ್ತು ಮಹದೇವ ಶೆಟ್ಟಿ ನಡುವೆ ಕೆಲವು ದಿನಗಳ ಹಿಂದೆ ಗಲಾಟೆ ನಡೆದಿತ್ತು.
ಇಂದು ರಂಗಸ್ವಾಮಿ ಗ್ರಾಮದ ಬೇಕರಿಯ ಬಳಿ ಕುಳಿತುಕೊಂಡಿದ್ದ ವೇಳೆ ಮಹದೇವ ಶೆಟ್ಟಿ ಮತ್ತು ರಂಗಸ್ವಾಮಿ ಇಬ್ಬರ ನಡುವೆ ಗಲಾಟೆ ನಡೆದು ಗಲೋಟೆ ವಿಕೋಪಕ್ಕೆ ತಿರುಗಿದ ಪರಿಣಾಮ ಮಹದೇವ ಶೆಟ್ಟಿ ರಂಗಸ್ವಾಮಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿವೈಎಸ್ಪಿ ರಘು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಸುನೀಲ್ ಕುಮಾರ್ ಸ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿಯ ಸೆರೆಗಾಗಿ ಬಲೆ ಬೀಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು