4:04 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ ಹೊರಬರಲಿ: ಪದ್ಮರಾಜ್ ಆರ್.

06/09/2024, 21:54

ಮಂಗಳೂರು(reporterkarnataka.com): ಗಣೇಶೋತ್ಸವ ಸೇರಿದಂತೆ ಯಾವುದೇ ಹಬ್ಬಗಳಿಗೆ ಕಾಂಗ್ರೆಸ್‌ ಸರಕಾರ ಎಂದೂ ತೊಡಕುಂಟುಮಾಡಿಲ್ಲ. ಅದರ ಬಗ್ಗೆ ಯಾರಿಗೂ ಆತಂಕ ಬೇಡ. ಶಾಸಕ ವೇದವ್ಯಾಸ ಕಾಮತ್ ಅವರು ಸಂಕುಚಿತ ಭಾವನೆಯಿಂದ ಹೊರಬರಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್‌ ಆರ್‌. ಹೇಳಿದ್ದಾರೆ.
ಗಣೇಶೋತ್ಸವ ಆಚರಣೆಗೆ ಸರ್ಕಾರ ಅಡ್ಡಿಪಡಿಸುತ್ತಿದೆ ಎಂಬ ಶಾಸಕ ವೇದವ್ಯಾಸ ಕಾಮತ್‌ ಹೇಳಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿ ಖಂಡಿಸಿರುವ ಅವರು, ಬಿಜೆಪಿ ಅವಧಿಯಲ್ಲೂ ಗಣೇಶೋತ್ಸವ ಆಚರಣೆಗೆ ಅನುಮತಿ ಪಡೆಯುವ ನಿಯಮ ಇತ್ತು. ಸುವ್ಯವಸ್ಥಿತ ರೀತಿಯಲ್ಲಿ ಹಬ್ಬ ಆಚರಿಸಲು ಕಾಲಕಾಲಕ್ಕೆ ನಿಯಮಗಳಲ್ಲಿ ಮಾರ್ಪಾಟು ಮಾಡಲಾಗುತ್ತದೆ ಎಂದರು.
ಮುಂಜಾಗ್ರತೆ ಕ್ರಮವಾಗಿ ಆಯೋಜಕರಿಂದ ಸೂಕ್ತ ಮಾಹಿತಿ ಕೇಳುವುದರಲ್ಲಿ ತಪ್ಪೇನಿದೆ? ಮಾಹಿತಿ ಕೇಳಿದ ಮಾತ್ರಕ್ಕೆ ಹಬ್ಬ ನಿಲ್ಲಿಸುವ ಹುನ್ನಾರ ಅಂತ ಏಕೆ ಹೇಳುತ್ತೀರಿ ಎಂದು ಪದ್ಮರಾಜ್ ಪ್ರಶ್ನಿಸಿದರು.
ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ
ಮೌಖಿಕ ಆದೇಶದ ಮೇರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಆರೋಪಿಸಿರುವ ವೇದವ್ಯಾಸ ಕಾಮತ್‌ ತಾವು ಈ ಕ್ಷೇತ್ರದ ಶಾಸಕರು ಎಂಬುದನ್ನೇ ಮರೆತಿದ್ದಾರೆ. ನೀವೇ ಶಾಸಕರು, ನಿಮ್ಮದೇ ಪಕ್ಷದ ಆಡಳಿತ ಮಹಾನಗರ ಪಾಲಿಕೆಯಲ್ಲಿದೆ. ಹೀಗಿರುವಾಗ ಶಾಸಕರಾಗಿ ಸಂಚಾರ ಸಮಸ್ಯೆ ಪರಿಹರಿಸಲು ಯಾವ ಕ್ರಮ ಕೈಗೊಂಡಿದ್ದೀರಿ? ಈ ಬಗ್ಗೆ ಉಸ್ತುವಾರಿ ಸಚಿವರ ಬಗ್ಗೆ ಚರ್ಚೆ ನಡೆಸಿದ್ದೀರಾ? ಅವರೇನಾದರೂ ನಿಮ್ಮ ಸಲಹೆ ನಿರ್ಲಕ್ಷಿಸಿದ್ದಾರಾ ಎಂದು ಪದ್ಮರಾಜ್‌ ಪ್ರಶ್ನಿಸಿದರು.
ಅಂದಿನ‌ ಬಿಜೆಪಿ ಸರಕಾರವೇ
ರಾಜ್ಯದಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಜಾರಿ ಮಾಡಿತ್ತು. ಕಾಂಗ್ರೆಸ್ ಅಧಿಕಾರವಧಿಯಲ್ಲಿ ತೆರಿಗೆ ಏರಿಕೆ ಮಾಡೇ ಇಲ್ಲ. ನೀರಿನ ಬೆಲೆಯನ್ನೂ 3 ಪಟ್ಟು ಏರಿಸಿದ್ದಾರೆ. ಕಾಂಗ್ರೆಸ್‌ ಅವಧಿಯಲ್ಲಿ 25 ಸಾವಿರ ಲೀ. ನೀರನ್ನು 65 ರೂ.ಗೆ ನೀಡಲಾಗುತ್ತಿತ್ತು. ಬಿಜೆಪಿ ಆಡಳಿತದಲ್ಲಿ ಈಗ 8 ಸಾವಿರ ಲೀ.ಗೆ 135 ರೂ. ವಸೂಲಿ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಪ್ರೇಮ್‌ ಬಲ್ಲಾಳ್‌ಬಾಗ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು