2:35 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್ ಸೀಟು ಪಡೆದ ಕತೆ!!

07/09/2024, 18:31

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ತೊಟ್ಟಿಲು ತೂಗಿದ ಕೈಗಳು ಇಡೀ ದೇಶವನ್ನೇ ಆಳ್ವಿಕೆ ಮಾಡಿದ ಉದಾಹರಣೆ ನಮ್ಮುಂದೆ ಇರುವಾಗ ಛಲವೊಂದಿದ್ದರೆ, ಏನನ್ನೂ ಸಾಧಿಸಬಹುದು ಎನ್ನುವುದು ಮತ್ತಷ್ಟು ಸ್ಷಷ್ಟ. ಇದಕ್ಕೊಂದು ನಮ್ಮ ನಿಮ್ಮ ನಡುವಿನ ಹುಡ್ಗಿಯೊಬ್ಬಳು ನಿದರ್ಶನ.
ಮಂಗಳೂರು ಹೊರವಲಯದ ಕೊಣಾಜೆ ಮುಟಿಂಜ ನಿವಾಸಿ ಪದ್ಮನಾಭ ಬಂಗೇರ ಹಾಗೂ ನೀರಜಾ ಅವರ ಪುತ್ರಿ ತನ್ವಿ ಛಲದಿಂದ ಗೆದ್ದಾಕೆ.ತನ್ವಿ ತಾಯಿ ಖಾಸಗಿ ಏಜೆನ್ಸಿಯಲ್ಲಿ ಅಕೌಂಟೆಂಟ್, ತಂದೆ ಮೇಸ್ತ್ರಿ. ಆರ್ಥಿಕವಾಗಿ ಅಷ್ಟೇನು ಗಟ್ಟಿಗರಲ್ಲ. ಆದರೆ ಪ್ರತಿಭೆ ಆ ಹುಡುಗಿಗೆ ಬೆನ್ನೆಲುಬು ತರಹ ಸಹಾಯ ಮಾಡಿತು. ಎಸ್‌ಎಸ್‌ಎಲ್‌ಸಿಯಲ್ಲಿ 613 ಅಂಕ, ಪಿಯುಸಿಯಲ್ಲಿ 575 ಅಂಕ ಪಡೆದವಳಾಕೆ. ವೈದ್ಯೆಯಾಗುವ ಕನಸು ಕಂಡಿದ್ದಳು. ಮಗಳು ವೈದ್ಯೆಯಾಗಬೇಕು ಎಂಬುದು ಪೋಷಕರ ಕನಸು ಕೂಡ ಆಗಿತ್ತು. ಆದರೆ ಲಕ್ಷಗಟ್ಟಲೆ ಶುಲ್ಕ ಪಾವತಿಸಿ ಎಂಬಿಬಿಎಸ್ ಓದುವುದು ಅವರಿಗೆ ಕನಸಿನ ಮಾತಾಗಿತ್ತು. ಈ ನಡುವೆ ಕಳೆದ ವರ್ಷದ ನೀಟ್ (NEET) ಪರೀಕ್ಷೆಯಲ್ಲಿ ಆಕೆ 720ಕ್ಕೆ 457 ಅಂಕಗಳನ್ನು ಗಳಿಸಿ 1,55,670 ರ್ಯಾಂಕ್ ಪಡೆದಿದ್ದಳು. ಈ ಶ್ರೇಣಿಯಲ್ಲಿ ಆಕೆ ಎಂಬಿಬಿಎಸ್ ಸೀಟು ಪಡೆದಿದ್ದರೂ, ಲಕ್ಷಾಂತರ ಶುಲ್ಕವನ್ನು ಪಾವತಿಸಬೇಕಾಗಿತ್ತು. ಈ ವೇಳೆ ಪೋಷಕರು ತನ್ವಿಗೆ ನರ್ಸಿಂಗ್ ಓದುವುದೇ ಸೂಕ್ತ ಎಂದು ನಿರ್ಧರಿಸಿದ್ದರು. ಆದರೆ ವೈದ್ಯಳಾಗುವ ಕನಸಿಗೆ ಮಾತ್ರ ಹಿಂದೆ ಸರಿಯಲಿಲ್ಲ. ಅಷ್ಟರಲ್ಲಿ ನಾನೇಕೆ ನೀಟ್ ಓದಿ ಮತ್ತೆ ಎಂಬಿಬಿಎಸ್ ಸೀಟು ಪಡೆಯಬಾರದು ಎಂದು ಹಠಕ್ಕೆ ಬಿದ್ದಳು. ಮಂಗಳೂರಿನಲ್ಲಿ ಎಂಬಿಬಿಎಸ್ ಸೀಟು ಪಡೆಯಬೇಕೆಂದು ಹಠಕ್ಕೆ ಬಿದ್ದು ಯೆನೆಪೊಯದಲ್ಲಿ ಉಚಿತ ಕೋಚಿಂಗ್ ಪಡೆದು ಈ ವರ್ಷ ನೀಟ್ ನಲ್ಲಿ 720ರಲ್ಲಿ 647 (28,782 ಆಲ್ ಇಂಡಿಯಾ ರ್ಯಾಂಕ್) ಗಳಿಸಿದ್ದಾಳೆ. ಮಂಗಳೂರು ಕೆಎಂಸಿಯಲ್ಲಿ ಎಂಬಿಬಿಎಸ್ ಸೀಟು ಪಡೆದು ವಿದ್ಯಾರ್ಥಿಗಳಿಗೆ ಮಾದರಿ ಎನಿಸಿದ್ದಾಳೆ. ಗುರುಬೆಳದಿಂಗಳು ಫೌಂಡೇಶನ್ ಕುದ್ರೋಳಿ ತನ್ವಿಯ ಮುಂದಿನ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು