4:34 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಬಾಂಧವ್ಯ ಬೆಸೆಯುತ್ತದೆ: ಬಾಲಚಂದ್ರ ಜಾರಕಿಹೊಳಿ

08/09/2024, 22:56

ಸಂತೋಷ್ ಬೆಳಗಾವಿ.

info.reporterkarnataka@gmail.com

ಜಾತ್ರೆ, ಧಾರ್ಮಿಕ ಕಾರ್ಯಕ್ರಮಗಳಿಂದ ಭಕ್ತಿ, ಶ್ರದ್ದಾ ಮನೋಭಾವನೆ ಬೆಳೆದು ಪರಸ್ಪರರಲ್ಲಿ ಬಾಂಧವ್ಯ ಬೆಸೆಯುತ್ತವೆ. ಜಾತ್ರೆಯಲ್ಲಿ ಅನೇಕ ಮಹಾತ್ಮರನ್ನು ಕರೆಯಿಸಿ ಒಳ್ಳೆಯ ವಿಚಾರಗಳನ್ನು ಹೇಳಿಸಿ ಜಾತ್ರೆಯನ್ನು ವಿಶೇಷವಾಗಿ ಮಾಡಿ ಗ್ರಾಮವನ್ನು ಉದ್ದಾರ ಮಾಡುತ್ತಿರುವ ಶ್ರೀ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅವರು ಶಿವಾಪೂರ(ಹ) ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಭಾರತ ದೇಶದಲ್ಲಿ ನೂರಾರು ಜಾತಿ, ಧರ್ಮ ಜನಾಂಗಗಳಿವೆ ಪೂಜ್ಯರ ದೇವರ ಆಶೀರ್ವಾದದಿಂದ ಎಲ್ಲರೂ ಭಾರತದಲ್ಲಿ ಸಹಬಾಳ್ವೆಯಿಂದ ಒಗ್ಗಟ್ಟಾಗಿದ್ದೇವೆ. ಆದರೆ ಬಾಂಗ್ಲಾ ದೇಶದಂತಹ ದೇಶಗಳಲ್ಲಿ ಒಂದೇ ಜನಾಂಗದವರಿದ್ದರು ಅಲ್ಲಿ ದಂಗೆಗಳಾಗುತ್ತಿವೆ. ಶ್ರೀ ಮಠದ ಹಾಗೂ ಧಾರ್ಮಿಕ ಕಾರ್ಯಕ್ರಮದ ವಿಚಾರದಲ್ಲಿ ಯಾರು ಕೂಡಾ ರಾಜಕೀಯ ಹಾಗೂ ಜಾತಿ ಬೇಧ ಭಾವ ಮಾಡಬಾರದು. ತಮ್ಮ ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಶಿಕ್ಷಣಕ್ಕೆ ಮಹತ್ವ ಕೊಡಬೇಕು. ಶ್ರೀ ಮಠಕ್ಕೆ ಎಲ್ಲ ರೀತಿಯ ಸಹಾಯ ಸಹಕಾರ ಮಾಡುತ್ತೇವೆ ಎಂದು ಹೇಳಿದರು. ಸಾನಿಧ್ಯವನ್ನು ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮಿಜಿ. ವೀರೇಶ್ವರ ಸ್ವಾಮಿಜಿ. ಅಭಿನವ ಚನ್ನಬಸವ ಸ್ವಾಮೀಜಿ ಗಳು ಸೇರಿದಂತೆ ಗ್ರಾಮದ ಗುರು ಹಿರಿಯರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು