7:28 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ‌ ಸಹೋದರತೆ!: ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ !!; ಅರಿಶಿನ-ಕುಂಕುಮ ಜತೆ ಸೀರೆ ಗಿಫ್ಟ್!!!

09/09/2024, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದೆಡೆ ಸಬ್ ಇನ್ಸ್ ಪೆಕ್ಟರ್ ರಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಸುದ್ದಿ ಮಾಡಿದ್ದರೆ, ಇಲ್ಲೊಬ್ಬರು ಸಬ್ ಇನ್ಸ್ ಪೆಕ್ಟರ್ ತಮ್ಮ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ನೀಡಿ ಸೋದರತ್ವ ಮೆರೆದಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆ ಎರಡು ಬಗೆಯ ಪೊಲೀಸರಿಗೆ ಸಾಕ್ಷಿಯಾಗಿದೆ.
ಕಾಫಿನಾಡಿನ ಬಾಳೆಹೊನ್ನೂರು ಪಿಎಸ್ಐ ರವೀಶ್ ಅವರು ಗಣೇಶ ಚೌತಿಯ ಅಂಗವಾಗಿ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಮಹಿಳಾ ಸಿಬ್ಬಂದಿಗೆ ಬಾಗಿನ ನೀಡಿ ಸೋದರತ್ವ ಭಾವನೆ ಮೆರೆದಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಿಎಸ್ಐ ಬಸವರಾಜ್ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಆರೋಪವಿದೆ. ಆದರೆ ಇದಕ್ಕೆ ವಿರುದ್ಧವಾಗಿ ಬಾಳೆಹೊನ್ನೂರು ಪಿಎಸ್ಐ ರವೀಶ್ ರಿಂದ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಕೆ ಮಾಡಿ ಅವರನ್ನು ತನ್ನ ಸಹೋದರಿಯರಾಗಿ ಪರಿಗಣಿಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ಅರಿಶಿನ-ಕುಂಕುಮ, ಹಣ್ಣು-ಕಾಯಿ, ಬಳೆ, ಸೀರೆ, ಸ್ವಿಟ್ಸ್ ಕೊಟ್ಟು ಗೌರವಿಸಿದ್ದಾರೆ.
ಗೌರಿ-ಗಣೇಶ ಹಬ್ಬದಂದು ಸಹೋದರರು ಅಕ್ಕ-ತಂಗಿಯರಿಗೆ ಬಾಗಿನ ನೀಡುತ್ತಾರೆ.
ನಮ್ಮ ಠಾಣೆಯ ಮಹಿಳಾ ಸಿಬ್ಬಂದಿಗಳು ನಮ್ಮ ಸಹೋದರಿಯರು ಎಂದು ಬಾಗಿನ ಕೊಟ್ಟ ಪಿಎಸ್ಐ ರವೀಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು