6:47 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಖಾಕಿ ಹಿಂದಿನ‌ ಸಹೋದರತೆ!: ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ ಬಾಳೆಹೊನ್ನೂರು ಪಿಎಸ್ಐ ರವೀಶ್ !!; ಅರಿಶಿನ-ಕುಂಕುಮ ಜತೆ ಸೀರೆ ಗಿಫ್ಟ್!!!

09/09/2024, 14:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಒಂದೆಡೆ ಸಬ್ ಇನ್ಸ್ ಪೆಕ್ಟರ್ ರಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿ ಸುದ್ದಿ ಮಾಡಿದ್ದರೆ, ಇಲ್ಲೊಬ್ಬರು ಸಬ್ ಇನ್ಸ್ ಪೆಕ್ಟರ್ ತಮ್ಮ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ನೀಡಿ ಸೋದರತ್ವ ಮೆರೆದಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆ ಎರಡು ಬಗೆಯ ಪೊಲೀಸರಿಗೆ ಸಾಕ್ಷಿಯಾಗಿದೆ.
ಕಾಫಿನಾಡಿನ ಬಾಳೆಹೊನ್ನೂರು ಪಿಎಸ್ಐ ರವೀಶ್ ಅವರು ಗಣೇಶ ಚೌತಿಯ ಅಂಗವಾಗಿ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಸಿದ್ದಾರೆ. ಸಬ್ ಇನ್ಸ್ ಪೆಕ್ಟರ್ ಮಹಿಳಾ ಸಿಬ್ಬಂದಿಗೆ ಬಾಗಿನ ನೀಡಿ ಸೋದರತ್ವ ಭಾವನೆ ಮೆರೆದಿದ್ದಾರೆ.


ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಿಎಸ್ಐ ಬಸವರಾಜ್ ವಿರುದ್ಧ ಮಹಿಳಾ ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ಆರೋಪವಿದೆ. ಆದರೆ ಇದಕ್ಕೆ ವಿರುದ್ಧವಾಗಿ ಬಾಳೆಹೊನ್ನೂರು ಪಿಎಸ್ಐ ರವೀಶ್ ರಿಂದ ನಾಲ್ವರು ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಲ್ಲಿಕೆ ಮಾಡಿ ಅವರನ್ನು ತನ್ನ ಸಹೋದರಿಯರಾಗಿ ಪರಿಗಣಿಸಿದ್ದಾರೆ. ಮಹಿಳಾ ಸಿಬ್ಬಂದಿಗಳಿಗೆ ಅರಿಶಿನ-ಕುಂಕುಮ, ಹಣ್ಣು-ಕಾಯಿ, ಬಳೆ, ಸೀರೆ, ಸ್ವಿಟ್ಸ್ ಕೊಟ್ಟು ಗೌರವಿಸಿದ್ದಾರೆ.
ಗೌರಿ-ಗಣೇಶ ಹಬ್ಬದಂದು ಸಹೋದರರು ಅಕ್ಕ-ತಂಗಿಯರಿಗೆ ಬಾಗಿನ ನೀಡುತ್ತಾರೆ.
ನಮ್ಮ ಠಾಣೆಯ ಮಹಿಳಾ ಸಿಬ್ಬಂದಿಗಳು ನಮ್ಮ ಸಹೋದರಿಯರು ಎಂದು ಬಾಗಿನ ಕೊಟ್ಟ ಪಿಎಸ್ಐ ರವೀಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು