11:50 PM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಗ್ಲೋಬಲೈಜ್ ಪ್ರಭಾವದಿಂದ ಸಾಹಿತ್ಯ ರಚನೆಯಲ್ಲಿ ವಿವಿಧ ಭಾಷೆಗಳ ಪ್ರವೇಶ ಸಾಮಾನ್ಯವಾಗಿದೆ: ಸಾಹಿತಿ ಚಂದ್ರಕಲಾ ನಂದಾವರ

09/09/2024, 20:03

ಮಂಗಳೂರು(reporterkarnataka.com):ಸಾಹಿತ್ಯದ ರಚನೆಯಲ್ಲಿ ವಿವಿಧ ಭಾಷೆಗಳು ತುರುಕಿ ಬರುವುದು ಈಗಿನ ಗ್ಲೋಬಲೈಜ್ ನಿಂದ ಸಾಮಾನ್ಯ. ನಾವು ಸಾಹಿತ್ಯದ ಬರವಣಿಗೆ ಮಾಡುವಾಗ ಮೂಲ‌ ಆಂಗ್ಲ ಶಬ್ದ ಬರೆದರೆ ಸರಿಯಾದ ಸಾಂದರ್ಭಿಕ ಅರ್ಥ ಬರಲು ಸುಲಭ ಆದೀತು ಎಂದು ಹಿರಿಯ ಶಿಕ್ಷಕಿ ಸಾಹಿತಿ ಚಂದ್ರಕಲಾ ನಂದಾವರ ಹೇಳಿದರು.
ಅವರು ಪ್ರೆಸ್ ಕ್ಲಬ್ ನಲ್ಲಿ ರೇಮಂಡ್ ಡಿಕೂನಾ ತಾಕೊಡೆ ಬರೆದ ಆಭರಣಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ‌ಪುಸ್ತಕ‌ ಪರಿಚಯ ಮಾಡಿ ಮಾತನಾಡುತ್ತಿದ್ದರು.
ಪತ್ರಕರ್ತರ ಜೀವನ ಮತ್ತು ಸಾಹಿತಿ ಹಾಗೂ ಶಿಕ್ಷಕರ ಜೀವನ ಒಂದು ಪ್ರೆಶರ್ ನಲ್ಲಿ ಈಗ ಇದೆ. ಯಾವುದು ಬರೆಯಬೇಕು, ಹೇಳಬೇಕು, ಕಲಿಸಬೇಕು ಎಂದು ಹೇಳುವ ಒತ್ತಡ ಇಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಮುಕ್ತವಾಗಿ ಮತ್ತು ಸರಳವಾಗಿ ಎಲ್ಲವೂ ಇದ್ದರೆ ಒಳ್ಳೆಯದು ಎಂಬುವ ಅಭಿಪ್ರಾಯ ವ್ಯಕ್ತಪಡಿಸಿದರು.
ಪುಸ್ತಕ ಬಿಡುಗಡೆ ಮಾಡಿದ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಸಾಹಿತ್ಯದ ಮಗ್ಗುಲುಗಳನ್ನು ಪತ್ರಕರ್ತರ ಜೀವನದ ಒಂದು ಅಂಶ ಅದನ್ನು ಮರೆಯದೆ ಬರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರೆಸ್ ಕ್ಲಬ್ ಆಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪ್ರತಿಯೊಬ್ಬ ಪತ್ರಕರ್ತರು ತಮ್ಮ ಬೈಲೈನ್ ಆರ್ಟಿಕಲ್ಸ್ ಸಂಗ್ರಹಿಸಿ ಪುಸ್ತಕ ಪ್ರಕಟ ಮಾಡಬೇಕು. ಇಲ್ಲವಾದರೆ ನಾವು ಎಷ್ಟು ದೊಡ್ಡ ಪತ್ರಕರ್ತರು ಆದರೂ‌ ಮತ್ತೆ ಮರೆತು ಹೋಗುತ್ತವೆ ಎಂದರು.
ಹಿರಿಯ ಪತ್ರಕರ್ತ ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಸ್ವಾಗತಿಸಿದರು. ರಿಯಾನಾ ಡಿಕೂನಾ ವಂದಿಸಿದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಪತ್ರಕರ್ತ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು