4:11 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ಗ್ಲೋಬಲೈಜ್ ಪ್ರಭಾವದಿಂದ ಸಾಹಿತ್ಯ ರಚನೆಯಲ್ಲಿ ವಿವಿಧ ಭಾಷೆಗಳ ಪ್ರವೇಶ ಸಾಮಾನ್ಯವಾಗಿದೆ: ಸಾಹಿತಿ ಚಂದ್ರಕಲಾ ನಂದಾವರ

09/09/2024, 20:03

ಮಂಗಳೂರು(reporterkarnataka.com):ಸಾಹಿತ್ಯದ ರಚನೆಯಲ್ಲಿ ವಿವಿಧ ಭಾಷೆಗಳು ತುರುಕಿ ಬರುವುದು ಈಗಿನ ಗ್ಲೋಬಲೈಜ್ ನಿಂದ ಸಾಮಾನ್ಯ. ನಾವು ಸಾಹಿತ್ಯದ ಬರವಣಿಗೆ ಮಾಡುವಾಗ ಮೂಲ‌ ಆಂಗ್ಲ ಶಬ್ದ ಬರೆದರೆ ಸರಿಯಾದ ಸಾಂದರ್ಭಿಕ ಅರ್ಥ ಬರಲು ಸುಲಭ ಆದೀತು ಎಂದು ಹಿರಿಯ ಶಿಕ್ಷಕಿ ಸಾಹಿತಿ ಚಂದ್ರಕಲಾ ನಂದಾವರ ಹೇಳಿದರು.
ಅವರು ಪ್ರೆಸ್ ಕ್ಲಬ್ ನಲ್ಲಿ ರೇಮಂಡ್ ಡಿಕೂನಾ ತಾಕೊಡೆ ಬರೆದ ಆಭರಣಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ‌ಪುಸ್ತಕ‌ ಪರಿಚಯ ಮಾಡಿ ಮಾತನಾಡುತ್ತಿದ್ದರು.
ಪತ್ರಕರ್ತರ ಜೀವನ ಮತ್ತು ಸಾಹಿತಿ ಹಾಗೂ ಶಿಕ್ಷಕರ ಜೀವನ ಒಂದು ಪ್ರೆಶರ್ ನಲ್ಲಿ ಈಗ ಇದೆ. ಯಾವುದು ಬರೆಯಬೇಕು, ಹೇಳಬೇಕು, ಕಲಿಸಬೇಕು ಎಂದು ಹೇಳುವ ಒತ್ತಡ ಇಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಮುಕ್ತವಾಗಿ ಮತ್ತು ಸರಳವಾಗಿ ಎಲ್ಲವೂ ಇದ್ದರೆ ಒಳ್ಳೆಯದು ಎಂಬುವ ಅಭಿಪ್ರಾಯ ವ್ಯಕ್ತಪಡಿಸಿದರು.
ಪುಸ್ತಕ ಬಿಡುಗಡೆ ಮಾಡಿದ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಸಾಹಿತ್ಯದ ಮಗ್ಗುಲುಗಳನ್ನು ಪತ್ರಕರ್ತರ ಜೀವನದ ಒಂದು ಅಂಶ ಅದನ್ನು ಮರೆಯದೆ ಬರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರೆಸ್ ಕ್ಲಬ್ ಆಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪ್ರತಿಯೊಬ್ಬ ಪತ್ರಕರ್ತರು ತಮ್ಮ ಬೈಲೈನ್ ಆರ್ಟಿಕಲ್ಸ್ ಸಂಗ್ರಹಿಸಿ ಪುಸ್ತಕ ಪ್ರಕಟ ಮಾಡಬೇಕು. ಇಲ್ಲವಾದರೆ ನಾವು ಎಷ್ಟು ದೊಡ್ಡ ಪತ್ರಕರ್ತರು ಆದರೂ‌ ಮತ್ತೆ ಮರೆತು ಹೋಗುತ್ತವೆ ಎಂದರು.
ಹಿರಿಯ ಪತ್ರಕರ್ತ ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಸ್ವಾಗತಿಸಿದರು. ರಿಯಾನಾ ಡಿಕೂನಾ ವಂದಿಸಿದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಪತ್ರಕರ್ತ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು