1:31 PM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಗ್ಲೋಬಲೈಜ್ ಪ್ರಭಾವದಿಂದ ಸಾಹಿತ್ಯ ರಚನೆಯಲ್ಲಿ ವಿವಿಧ ಭಾಷೆಗಳ ಪ್ರವೇಶ ಸಾಮಾನ್ಯವಾಗಿದೆ: ಸಾಹಿತಿ ಚಂದ್ರಕಲಾ ನಂದಾವರ

09/09/2024, 20:03

ಮಂಗಳೂರು(reporterkarnataka.com):ಸಾಹಿತ್ಯದ ರಚನೆಯಲ್ಲಿ ವಿವಿಧ ಭಾಷೆಗಳು ತುರುಕಿ ಬರುವುದು ಈಗಿನ ಗ್ಲೋಬಲೈಜ್ ನಿಂದ ಸಾಮಾನ್ಯ. ನಾವು ಸಾಹಿತ್ಯದ ಬರವಣಿಗೆ ಮಾಡುವಾಗ ಮೂಲ‌ ಆಂಗ್ಲ ಶಬ್ದ ಬರೆದರೆ ಸರಿಯಾದ ಸಾಂದರ್ಭಿಕ ಅರ್ಥ ಬರಲು ಸುಲಭ ಆದೀತು ಎಂದು ಹಿರಿಯ ಶಿಕ್ಷಕಿ ಸಾಹಿತಿ ಚಂದ್ರಕಲಾ ನಂದಾವರ ಹೇಳಿದರು.
ಅವರು ಪ್ರೆಸ್ ಕ್ಲಬ್ ನಲ್ಲಿ ರೇಮಂಡ್ ಡಿಕೂನಾ ತಾಕೊಡೆ ಬರೆದ ಆಭರಣಗಳು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ‌ಪುಸ್ತಕ‌ ಪರಿಚಯ ಮಾಡಿ ಮಾತನಾಡುತ್ತಿದ್ದರು.
ಪತ್ರಕರ್ತರ ಜೀವನ ಮತ್ತು ಸಾಹಿತಿ ಹಾಗೂ ಶಿಕ್ಷಕರ ಜೀವನ ಒಂದು ಪ್ರೆಶರ್ ನಲ್ಲಿ ಈಗ ಇದೆ. ಯಾವುದು ಬರೆಯಬೇಕು, ಹೇಳಬೇಕು, ಕಲಿಸಬೇಕು ಎಂದು ಹೇಳುವ ಒತ್ತಡ ಇಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಮುಕ್ತವಾಗಿ ಮತ್ತು ಸರಳವಾಗಿ ಎಲ್ಲವೂ ಇದ್ದರೆ ಒಳ್ಳೆಯದು ಎಂಬುವ ಅಭಿಪ್ರಾಯ ವ್ಯಕ್ತಪಡಿಸಿದರು.
ಪುಸ್ತಕ ಬಿಡುಗಡೆ ಮಾಡಿದ ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ಸಾಹಿತ್ಯದ ಮಗ್ಗುಲುಗಳನ್ನು ಪತ್ರಕರ್ತರ ಜೀವನದ ಒಂದು ಅಂಶ ಅದನ್ನು ಮರೆಯದೆ ಬರೆಯಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರೆಸ್ ಕ್ಲಬ್ ಆಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪ್ರತಿಯೊಬ್ಬ ಪತ್ರಕರ್ತರು ತಮ್ಮ ಬೈಲೈನ್ ಆರ್ಟಿಕಲ್ಸ್ ಸಂಗ್ರಹಿಸಿ ಪುಸ್ತಕ ಪ್ರಕಟ ಮಾಡಬೇಕು. ಇಲ್ಲವಾದರೆ ನಾವು ಎಷ್ಟು ದೊಡ್ಡ ಪತ್ರಕರ್ತರು ಆದರೂ‌ ಮತ್ತೆ ಮರೆತು ಹೋಗುತ್ತವೆ ಎಂದರು.
ಹಿರಿಯ ಪತ್ರಕರ್ತ ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಸ್ವಾಗತಿಸಿದರು. ರಿಯಾನಾ ಡಿಕೂನಾ ವಂದಿಸಿದರು. ಪತ್ರಕರ್ತರ ಸಂಘದ ಉಪಾಧ್ಯಕ್ಷ ಪತ್ರಕರ್ತ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು