8:13 PM Saturday7 - February 2026
ಬ್ರೇಕಿಂಗ್ ನ್ಯೂಸ್
NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಪ್ರತಿಕೃತಿಗೆ ಚಪ್ಪಲಿಯೇಟು, ಬೆಂಕಿ: ಶಾಸಕ ಯಶ್ ಪಾಲ್ ಸಹಿತ 11 ಮಂದಿ ವಿರುದ್ಧ ಎಫ್‌ಐಆರ್

09/09/2024, 23:07

ಉಡುಪಿ(reporterkarnataka.com): ಮುಖ್ಯಮಂತ್ರಿಯ ಪ್ರತಿಕೃತಿಗೆ ಚಪ್ಪಲಿಯೇಟು ನೀಡಿ ದಹಿಸಿದ ಪ್ರಕರಣ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶಿಕ್ಷಕರೊಬ್ಬರಿಗೆ ನೀಡಲಾದ ಪ್ರಶಸ್ತಿಯನ್ನು ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ವೃತ್ತದಲ್ಲಿ ಸೆ.6 ರಂದು ಪ್ರತಿಭಟನೆ ನಡೆಸಲಾಗಿತ್ತು.
ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯೇಟು ನೀಡಿ ಬೆಂಕಿ ಹಚ್ಚಲಾಗಿತ್ತು.
ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಮುಖ್ಯಮಂತ್ರಿ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು.
ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಎನ್‌ಎಸ್ ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಯಶ್ ಪಾಲ್ ಸುವರ್ಣ ಎ5 ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧವೂ ದೂರು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು