2:27 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮುಖ್ಯಮಂತ್ರಿ ಪ್ರತಿಕೃತಿಗೆ ಚಪ್ಪಲಿಯೇಟು, ಬೆಂಕಿ: ಶಾಸಕ ಯಶ್ ಪಾಲ್ ಸಹಿತ 11 ಮಂದಿ ವಿರುದ್ಧ ಎಫ್‌ಐಆರ್

09/09/2024, 23:07

ಉಡುಪಿ(reporterkarnataka.com): ಮುಖ್ಯಮಂತ್ರಿಯ ಪ್ರತಿಕೃತಿಗೆ ಚಪ್ಪಲಿಯೇಟು ನೀಡಿ ದಹಿಸಿದ ಪ್ರಕರಣ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶಿಕ್ಷಕರೊಬ್ಬರಿಗೆ ನೀಡಲಾದ ಪ್ರಶಸ್ತಿಯನ್ನು ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ವೃತ್ತದಲ್ಲಿ ಸೆ.6 ರಂದು ಪ್ರತಿಭಟನೆ ನಡೆಸಲಾಗಿತ್ತು.
ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯೇಟು ನೀಡಿ ಬೆಂಕಿ ಹಚ್ಚಲಾಗಿತ್ತು.
ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಮುಖ್ಯಮಂತ್ರಿ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು.
ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಮುಖ್ಯಮಂತ್ರಿಗಳ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಎನ್‌ಎಸ್ ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಯಶ್ ಪಾಲ್ ಸುವರ್ಣ ಎ5 ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧವೂ ದೂರು ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು