4:22 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ

ಇತ್ತೀಚಿನ ಸುದ್ದಿ

ಕಳೆದ 1 ವರ್ಷದಿಂದ ರಾಜ್ಯ ಸರಕಾರ ಒಂದು ರೂಪಾಯಿ ಅನುದಾನ ನೀಡಿಲ್ಲ: ಮಂಗಳೂರು ಮೇಯರ್

10/09/2024, 13:17

ಮಂಗಳೂರು(reporterkarnataka.com): ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಒಂದೇ ಒಂದು ರೂಪಾಯಿ ಅನುದಾನ ಬಂದಿಲ್ಲ. ಸಚಿವ ಬೈರತಿ ಸುರೇಶ್ ಬಂದು 75 ಕೋಟಿ ರೂ. ಅನುದಾನ ಕೊಡುತ್ತೇವೆ. ಮತ್ತೊಂದು ಸಲ 75 ಕೋಟಿ ರೂ. ಅನುದಾನ ಕೊಡುತ್ತೇವೆ ಎಂದಿದ್ದಾರೆ. ಇಲ್ಲಿಯವರೆಗೂ ಸರ್ಕಾರದಿಂದ ಒಂದೇ ಒಂದು ರುಪಾಯಿ ಅನುದಾನ ಬಂದಿಲ್ಲ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆದರೆ ವರ್ಗಾವಣೆಯಂತೂ ಸಾಕಷ್ಟು ದಂಧೆ ರೂಪದಲ್ಲಿ ನಡೆದಿದೆ. 16 ತಿಂಗಳಲ್ಲಿ ಯಾವುದೇ ವಿಶೇಷ ಅನುದಾನ ಸರ್ಕಾರ ನೀಡಲಿಲ್ಲ. ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಮಾಡಿದ ಯೋಜನೆಗಳ ಕಾಮಗಾರಿಯನ್ನು ಈ ಸರ್ಕಾರ ನಿಲ್ಲಿಸಿಬಿಟ್ಟಿದೆ ಎಂದು ಆರೋಪಿಸಿದರು.
ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಜಾಗದ ಗೈಡ್‌ಲೈನ್ಸ್ ವ್ಯಾಲುವನ್ನು ಹೆಚ್ಚಳ ಮಾಡಿದರ ಪರಿಣಾಮ ಮಂಗಳೂರು ಮಹಾನಗರ ಪಾಲಿಕೆಯ ಖಾಲಿ ಜಾಗಕ್ಕೆ ಹಾಕುವ ತೆರಿಗೆಯಲ್ಲಿ ಹೆಚ್ಚಳವಾಗಿರುವುದನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗುವುದು ಎಂದು ಅವರು ತಿಳಿಸಿದರು.
ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಜಾಗಕ್ಕೆ ಶೇ.0.20 ಇದ್ದ ತೆರಿಗೆಯನ್ನು ಶೇ.0.50ಕ್ಕೆ ಏರಿಕೆ ಮಾಡಲಾಗಿದೆ. ಆದರೆ ನಾವು ಅದನ್ನು ಶೇ.0.10ಕ್ಕೆ ಇಳಿಸಲು ಪ್ರತಿಪಕ್ಷದ ಸದಸ್ಯರ ಜತೆಗೆ ಸಭೆ ನಡೆಸಿ ನಿರ್ಧಾರಕ್ಕೆ ಬಂದಿದ್ದು, ಇದನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡುತ್ತೇವೆ. ಇದಕ್ಕೆ ಪ್ರತಿಪಕ್ಷದ ಸದಸ್ಯರು ಕೂಡ ನಮ್ಮ ಜತೆಗೆ ಬಂದು ನಗರಾಭಿವೃದ್ಧಿ ಸಚಿವ, ಇಲಾಖೆಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡುವ ಕೆಲಸಕ್ಕೆ ಮುಂದಾಗಬೇಕು ಎಂದರು.
ಸ್ವಯಂಘೋಷಿತ ಆಸ್ತಿ ತೆರಿಗೆ ಬಂದ ಬಳಿಕ ಪ್ರತಿ ವರ್ಷವೂ ಶೇ.5ರಷ್ಟು ತೆರಿಗೆ ಹೆಚ್ಚಳ ಮಾಡುವುದು ಕಾನೂನಿನಲ್ಲಿಯೇ ಇದೆ. ನಮ್ಮ ಅವಧಿಯಲ್ಲೂ 3 ವರ್ಷದಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿದ್ದೇವೆ. ಈ ಹಿಂದೆ ಎರಡು ಬಾರಿ ಕಾಂಗ್ರೆಸ್ ಅಧಿಕಾರ ಇದ್ದಾಗ ಕೂಡ ಹೆಚ್ಚಳ ಮಾಡುವ ಕೆಲಸವಾಗಿದೆ ಮೇಯರ್ ತಿಳಿಸಿದರು.
ಉಪ ಮೇಯರ್ ಸುನೀತಾ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರುಗಳಾದ ವರುಣ್ ಚೌಟ, ಲೋಹಿತ್, ಗಣೇಶ್ ಕುಮಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು