3:01 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಆಟೋರಿಕ್ಷಾದಡಿ ಸಿಲುಕಿ ಒದ್ದಾಡುತ್ತಿದ್ದ ಹೆತ್ತಬ್ಬೆಯ ರಕ್ಷಿಸಿದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ

10/09/2024, 21:54

ಮಂಗಳೂರು(reporterkarnataka.com): ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ತಾಯಿಗೆ ರಿಕ್ಷಾ ಡಿಕ್ಕಿ ಆಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಮಂಗಳವಾರ ತಮ್ಮ ಕಚೇರಿಯಲ್ಲಿ ಸನ್ಮಾನಿಸಿದರು.
7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಜಿಲ್ಲಾಧಿಕಾರಿ ಕಚೇರಿಯ ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿದ ಜಿಲ್ಲಾಧಿಕಾರಿಗಳು ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು ವೈಭವಿಯ ಧೈರ್ಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೂ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು