8:28 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಪಿಎಂಇಜಿಪಿ, ಮುದ್ರಾ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಳಕ್ಕೆ ಪ್ರಯತ್ನಿಸಿ: ಲೀಡ್ ಬ್ಯಾಂಕ್ ಸಭೆಯಲ್ಲಿ ಸಂಸದ ಕ್ಯಾ. ಚೌಟ ಸೂಚನೆ

10/09/2024, 22:16

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರಕಾರದ ಪಿಎಂಇಜಿಪಿ ಹಾಗೂ ಮುದ್ರಾ ಯೋಜನೆಯಡಿ ಗ್ರಾಮೀಣ ಭಾಗದವರಿಗೆ ವಿಶೇಷವಾಗಿ ಮಹಿಳೆಯರು ಹಾಗೂ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗದ ಹೆಚ್ಚಿನ ಫಲಾನುಭವಿಗಳನ್ನು ತಲುಪಲು ಬ್ಯಾಂಕ್ ಗಳು ಉತ್ತೇಜನ ನೀಡಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಕರೆ ನೀಡಿದರು.
ನಗರದ ಉರ್ವ ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ದ.ಕ ಜಿಲ್ಲಾ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ದೊರೆಯುವ ಸಾಲ-ಸೌಲಭ್ಯಗಳ ಬಗ್ಗೆ ಅರ್ಹ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಿ ಅದರ ಅನುಕೂಲ ದೊರಕಿಸಿ ಕೊಡುವುದಕ್ಕೆ ಜಿಲ್ಲೆಯಲ್ಲಿರುವ ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.
ಪಿಎಂಇಜಿಪಿ ಯೋಜನೆಗೆ ಫಲಾನುಭವಿಗಳ ಆಯ್ಕೆ ಹಾಗೂ ಆಯ್ಕೆಗೊಂಡ ಫಲಾನುಭವಿಗಳ ಸಹಾಯಧನ ವಿಚಾರವಾಗಿಯೂ ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಸಂಸದರು ವಿಸ್ತೃತವಾಗಿ ಚರ್ಚಿಸಿದರು.
ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರೈತರಿಗೆ ಕೆಸಿಸಿ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸುವುದಕ್ಕೆ ಬ್ಯಾಂಕ್ಗಳು ಆದ್ಯತೆ ನೀಡಬೇಕು. ಜತೆಗೆ ಉನ್ನತ ವಿದ್ಯಾಭ್ಯಾಸಕ್ಕೆ ಸಾಲ ನೀಡುವಲ್ಲಿ ಕೂಡ ಬ್ಯಾಂಕ್ಗಳು ಯಾವುದೇ ವಿಳಂಬ ಮಾಡದೆ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಸಾಲ ಮಂಜೂರು ಮಾಡಬೇಕೆಂದು ಬ್ಯಾಂಕ್ ಅಧಿಕಾರಿಗಳಿಗೆ ಕ್ಯಾ. ಚೌಟ ಅವರು ಸೂಚಿಸಿದರು.
ಪಿಎಂ-ಸ್ವನಿಧಿ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಾಲ-ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆ ಬಗ್ಗೆ ಬೀದಿಬದಿ ವ್ಯಾಪಾರಿಗಳಿಗೆ ಹೆಚ್ಚಿನ ಅರಿವು ಮೂಡಿಸುವ ಜತೆಗೆ ಅವರಿಗೆ ಸಾಲ ಸೌಲಭ್ಯವನ್ನು ಒದಗಿಸುವುದಕ್ಕೆ ಅಗತ್ಯ ಕ್ರಮ ವಹಿಸಬೇಕೆಂದು ಅವರು ತಿಳಿಸಿದರು.
ಸಂಸದರಾಗಿ ಆಯ್ಕೆಗೊಂಡ ಬಳಿಕ ಪಾಲ್ಗೊಂಡಿದ್ದ ಇಂದಿನ ಈ ಮೊದಲ ಲೀಡ್ ಬ್ಯಾಂಕ್ ಸಭೆಯಲ್ಲಿ ಕ್ಯಾ. ಚೌಟ ಅವರು ಜಿಲ್ಲೆಯ ಬ್ಯಾಂಕಿಂಗ್ ವಲಯದಲ್ಲಿರುವ ವಿವಿಧ ಯೋಜನೆಗಳು, ಗ್ರಾಹಕರ ಸಮಸ್ಯೆಗಳು ಸಮಸ್ಯೆಗಳು ಹಾಗೂ ಸಾಲ- ಸೌಲಭ್ಯಗಳ ವಿತರಣೆಯಲ್ಲಿ ಬ್ಯಾಂಕ್ ಗಳ ಪ್ರಗತಿ ಬಗ್ಗೆಯೂ ಬ್ಯಾಂಕ್ ಅಧಿಕಾರಿಗಳ ಜತೆಗೆ ಸಮಗ್ರವಾಗಿ ಪರಾಮರ್ಶೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು