5:20 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರು: ಕುಸಿತದ ಭೀತಿಯಲ್ಲಿ ಕೊಡಕ್ಕಲ್‌ ಗುಡ್ಡ ಪ್ರದೇಶ; ಆತಂಕದಲ್ಲಿ 40ಕ್ಕೂ ಹೆಚ್ಚು ಕುಟುಂಬಗಳು

11/09/2024, 17:49

ಮಂಗಳೂರು(reporterkarnataka.com): ಪ್ರಸಕ್ತ ಮುಂಗಾರಿನಲ್ಲಿ ಸಾಕಷ್ಟು ಭೂಕುಸಿತ ಸಂಭವಿಸಿದ್ದು, ಸಾಕಷ್ಟು ಸಾವು- ನೋವು ಘಟಿಸಿವೆ. ಇದೀಗ ಅಂತದ್ದೊಂದು ಅಪಾಯದ ಭೀತಿ ಮಂಗಳೂರಿನಲ್ಲೇ ಎದುರಾಗಿದೆ. ನಗರದ ಹೊರವಲಯದ ಪಡೀಲ್ ಸಮೀಪದ ಕೊಡಕ್ಕಲ್‌ ಎಂಬಲ್ಲಿ ಗುಡ್ಡಕುಸಿತದ ಭೀತಿ ಎದುರಾಗಿ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.


ಮಂಗಳೂರಿನ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಡೀಲ್‌ನ ಫಸ್ಟ್‌ ನ್ಯೂರೋ ಆಸ್ಪತ್ರೆಯ ಸಮೀಪದ ಕೊಡಕ್ಕಲ್‌ ಪ್ರದೇಶ ಇದೆ. ಇಲ್ಲಿ ಗುಡ್ಡ ಕುಸಿಯುವ ಆತಂಕದಲ್ಲಿದ್ದು, ಗುಡ್ಡದ ಮೇಲಿನ ನಿವಾಸಿಗಳು, ಕೆಳಗಿನ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಪಡೀಲ್‌ನ ಕೊಡಕ್ಕಲ್‌ ಎಂಬ ಪ್ರದೇಶದ ಇದಾಗಿದ್ದು, ಗುಡ್ಡದ ಮೇಲೆ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಇನ್ನು ಗುಡ್ಡದ ಬುಡದಲ್ಲೇ ಅಂಗಡಿ, ಮಳಿಗೆಗಳು ಹಾಗೂ ಮನೆಗಳಿದ್ದು, ಇದೂ ಕೂಡಾ ಅಪಾಯಕ್ಕೆ ಸಿಲುಕಿವೆ. ಈಗಾಗಲೇ ಗುಡ್ಡ ಸ್ವಲ್ಪ ಕುಸಿತ ಉಂಟಾಗಿದ್ದು, ಗುಡ್ಡದ ಅಂಚಿನಲ್ಲಿರೋ ಟಾಯ್ಲೆಟ್‌ ಒಂದು ಆಗಲೋ ಈಗಲೋ ಅನ್ನೋ ಸ್ಥಿತಿಯಲ್ಲಿ ಇದೆ. ಒಮ್ಮೆ ಇಲ್ಲಿ ಗುಡ್ಡ ಕುಸಿತ ಉಂಟಾದ್ರೆ ಭಾರಿ ಪ್ರಮಾಣದ ಅನಾಹುತ ಉಂಟಾಗುವ ಸಾದ್ಯತೆ ಇದೆ. ಮಳೆ ಇನ್ನೂ ದೂರವಾಗಿಲ್ಲದ ಕಾರಣ ಗುಡ್ಡ ಕುಸಿತದ ಆತಂಕ ಕೂಡಾ ದೂರವಾಗಿಲ್ಲ. ಮಳೆಗಾಲವನ್ನು ಆತಂಕದಲ್ಲೇ ಕಳೆದಿದ್ದ ಇಲ್ಲಿನ ನಿವಾಸಿಗಳು ಇದೀಗ ಮಳೆಯ ಭಯ ಕಾಡಲು ಆರಂಭವಾಗಿದೆ. ಇಲ್ಲಿ ಬಹಳ ವರ್ಷಗಳ ಹಿಂದೆ ಅಗೆತ ಮಾಡಲಾಗಿದೆ ಎನ್ನಲಾಗಿದೆ.
ಈ ಬಗ್ಗೆ ಜಿಲ್ಲಾಡಳಿತವ ಎಚ್ಚೆತ್ತು ಯಾವುದೇ ಮುಂಜಾಗ್ರತ ಕ್ರಮವಿಲ್ಲದೆ ಅಕ್ರಮವಾಗಿ ಮಣ್ಣುತೆಗೆದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು