9:12 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಮಂಗಳೂರು: ಕುಸಿತದ ಭೀತಿಯಲ್ಲಿ ಕೊಡಕ್ಕಲ್‌ ಗುಡ್ಡ ಪ್ರದೇಶ; ಆತಂಕದಲ್ಲಿ 40ಕ್ಕೂ ಹೆಚ್ಚು ಕುಟುಂಬಗಳು

11/09/2024, 17:49

ಮಂಗಳೂರು(reporterkarnataka.com): ಪ್ರಸಕ್ತ ಮುಂಗಾರಿನಲ್ಲಿ ಸಾಕಷ್ಟು ಭೂಕುಸಿತ ಸಂಭವಿಸಿದ್ದು, ಸಾಕಷ್ಟು ಸಾವು- ನೋವು ಘಟಿಸಿವೆ. ಇದೀಗ ಅಂತದ್ದೊಂದು ಅಪಾಯದ ಭೀತಿ ಮಂಗಳೂರಿನಲ್ಲೇ ಎದುರಾಗಿದೆ. ನಗರದ ಹೊರವಲಯದ ಪಡೀಲ್ ಸಮೀಪದ ಕೊಡಕ್ಕಲ್‌ ಎಂಬಲ್ಲಿ ಗುಡ್ಡಕುಸಿತದ ಭೀತಿ ಎದುರಾಗಿ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.


ಮಂಗಳೂರಿನ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಡೀಲ್‌ನ ಫಸ್ಟ್‌ ನ್ಯೂರೋ ಆಸ್ಪತ್ರೆಯ ಸಮೀಪದ ಕೊಡಕ್ಕಲ್‌ ಪ್ರದೇಶ ಇದೆ. ಇಲ್ಲಿ ಗುಡ್ಡ ಕುಸಿಯುವ ಆತಂಕದಲ್ಲಿದ್ದು, ಗುಡ್ಡದ ಮೇಲಿನ ನಿವಾಸಿಗಳು, ಕೆಳಗಿನ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಪಡೀಲ್‌ನ ಕೊಡಕ್ಕಲ್‌ ಎಂಬ ಪ್ರದೇಶದ ಇದಾಗಿದ್ದು, ಗುಡ್ಡದ ಮೇಲೆ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಇನ್ನು ಗುಡ್ಡದ ಬುಡದಲ್ಲೇ ಅಂಗಡಿ, ಮಳಿಗೆಗಳು ಹಾಗೂ ಮನೆಗಳಿದ್ದು, ಇದೂ ಕೂಡಾ ಅಪಾಯಕ್ಕೆ ಸಿಲುಕಿವೆ. ಈಗಾಗಲೇ ಗುಡ್ಡ ಸ್ವಲ್ಪ ಕುಸಿತ ಉಂಟಾಗಿದ್ದು, ಗುಡ್ಡದ ಅಂಚಿನಲ್ಲಿರೋ ಟಾಯ್ಲೆಟ್‌ ಒಂದು ಆಗಲೋ ಈಗಲೋ ಅನ್ನೋ ಸ್ಥಿತಿಯಲ್ಲಿ ಇದೆ. ಒಮ್ಮೆ ಇಲ್ಲಿ ಗುಡ್ಡ ಕುಸಿತ ಉಂಟಾದ್ರೆ ಭಾರಿ ಪ್ರಮಾಣದ ಅನಾಹುತ ಉಂಟಾಗುವ ಸಾದ್ಯತೆ ಇದೆ. ಮಳೆ ಇನ್ನೂ ದೂರವಾಗಿಲ್ಲದ ಕಾರಣ ಗುಡ್ಡ ಕುಸಿತದ ಆತಂಕ ಕೂಡಾ ದೂರವಾಗಿಲ್ಲ. ಮಳೆಗಾಲವನ್ನು ಆತಂಕದಲ್ಲೇ ಕಳೆದಿದ್ದ ಇಲ್ಲಿನ ನಿವಾಸಿಗಳು ಇದೀಗ ಮಳೆಯ ಭಯ ಕಾಡಲು ಆರಂಭವಾಗಿದೆ. ಇಲ್ಲಿ ಬಹಳ ವರ್ಷಗಳ ಹಿಂದೆ ಅಗೆತ ಮಾಡಲಾಗಿದೆ ಎನ್ನಲಾಗಿದೆ.
ಈ ಬಗ್ಗೆ ಜಿಲ್ಲಾಡಳಿತವ ಎಚ್ಚೆತ್ತು ಯಾವುದೇ ಮುಂಜಾಗ್ರತ ಕ್ರಮವಿಲ್ಲದೆ ಅಕ್ರಮವಾಗಿ ಮಣ್ಣುತೆಗೆದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು