11:19 AM Friday20 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಮಂಗಳೂರು: ಕುಸಿತದ ಭೀತಿಯಲ್ಲಿ ಕೊಡಕ್ಕಲ್‌ ಗುಡ್ಡ ಪ್ರದೇಶ; ಆತಂಕದಲ್ಲಿ 40ಕ್ಕೂ ಹೆಚ್ಚು ಕುಟುಂಬಗಳು

11/09/2024, 17:49

ಮಂಗಳೂರು(reporterkarnataka.com): ಪ್ರಸಕ್ತ ಮುಂಗಾರಿನಲ್ಲಿ ಸಾಕಷ್ಟು ಭೂಕುಸಿತ ಸಂಭವಿಸಿದ್ದು, ಸಾಕಷ್ಟು ಸಾವು- ನೋವು ಘಟಿಸಿವೆ. ಇದೀಗ ಅಂತದ್ದೊಂದು ಅಪಾಯದ ಭೀತಿ ಮಂಗಳೂರಿನಲ್ಲೇ ಎದುರಾಗಿದೆ. ನಗರದ ಹೊರವಲಯದ ಪಡೀಲ್ ಸಮೀಪದ ಕೊಡಕ್ಕಲ್‌ ಎಂಬಲ್ಲಿ ಗುಡ್ಡಕುಸಿತದ ಭೀತಿ ಎದುರಾಗಿ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದಾರೆ.


ಮಂಗಳೂರಿನ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಡೀಲ್‌ನ ಫಸ್ಟ್‌ ನ್ಯೂರೋ ಆಸ್ಪತ್ರೆಯ ಸಮೀಪದ ಕೊಡಕ್ಕಲ್‌ ಪ್ರದೇಶ ಇದೆ. ಇಲ್ಲಿ ಗುಡ್ಡ ಕುಸಿಯುವ ಆತಂಕದಲ್ಲಿದ್ದು, ಗುಡ್ಡದ ಮೇಲಿನ ನಿವಾಸಿಗಳು, ಕೆಳಗಿನ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಪಡೀಲ್‌ನ ಕೊಡಕ್ಕಲ್‌ ಎಂಬ ಪ್ರದೇಶದ ಇದಾಗಿದ್ದು, ಗುಡ್ಡದ ಮೇಲೆ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಇನ್ನು ಗುಡ್ಡದ ಬುಡದಲ್ಲೇ ಅಂಗಡಿ, ಮಳಿಗೆಗಳು ಹಾಗೂ ಮನೆಗಳಿದ್ದು, ಇದೂ ಕೂಡಾ ಅಪಾಯಕ್ಕೆ ಸಿಲುಕಿವೆ. ಈಗಾಗಲೇ ಗುಡ್ಡ ಸ್ವಲ್ಪ ಕುಸಿತ ಉಂಟಾಗಿದ್ದು, ಗುಡ್ಡದ ಅಂಚಿನಲ್ಲಿರೋ ಟಾಯ್ಲೆಟ್‌ ಒಂದು ಆಗಲೋ ಈಗಲೋ ಅನ್ನೋ ಸ್ಥಿತಿಯಲ್ಲಿ ಇದೆ. ಒಮ್ಮೆ ಇಲ್ಲಿ ಗುಡ್ಡ ಕುಸಿತ ಉಂಟಾದ್ರೆ ಭಾರಿ ಪ್ರಮಾಣದ ಅನಾಹುತ ಉಂಟಾಗುವ ಸಾದ್ಯತೆ ಇದೆ. ಮಳೆ ಇನ್ನೂ ದೂರವಾಗಿಲ್ಲದ ಕಾರಣ ಗುಡ್ಡ ಕುಸಿತದ ಆತಂಕ ಕೂಡಾ ದೂರವಾಗಿಲ್ಲ. ಮಳೆಗಾಲವನ್ನು ಆತಂಕದಲ್ಲೇ ಕಳೆದಿದ್ದ ಇಲ್ಲಿನ ನಿವಾಸಿಗಳು ಇದೀಗ ಮಳೆಯ ಭಯ ಕಾಡಲು ಆರಂಭವಾಗಿದೆ. ಇಲ್ಲಿ ಬಹಳ ವರ್ಷಗಳ ಹಿಂದೆ ಅಗೆತ ಮಾಡಲಾಗಿದೆ ಎನ್ನಲಾಗಿದೆ.
ಈ ಬಗ್ಗೆ ಜಿಲ್ಲಾಡಳಿತವ ಎಚ್ಚೆತ್ತು ಯಾವುದೇ ಮುಂಜಾಗ್ರತ ಕ್ರಮವಿಲ್ಲದೆ ಅಕ್ರಮವಾಗಿ ಮಣ್ಣುತೆಗೆದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಅಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು