6:56 AM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್ ಆಗಿ ಘಟನೆ ಬೆಳಕಿಗೆ

11/09/2024, 18:21

ಮಂಗಳೂರು(reporterkarnataka.com): ಜೀವಂತ ಸಾಕು ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನ ನೀಡಿದ ಅಘಾತಕ್ಕಾರಿ ಘಟನೆಯೊಂದು ಬುದ್ದಿವಂತರ ಜಿಲ್ಲೆ ಎನಿಸಿಕೊಂಡ ದ.ಕ. ಜಿಲ್ಲೆಯ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಡೊಂಗರಕೇರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಲವಂತವಾಗಿ ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ಎಳೆದೊಯ್ಯುವ ವೀಡಿಯೊವೊಂದು ವೈರಲ್ ಆಗುವ ಮೂಲಕ ಇಡೀ ಘಟನೆ 2 ದಿನಗಳ ಬಳಿಕ ಬೆಳಕಿಗೆ ಬಂದಿದೆ.
ಡೊಂಗರಕೇರಿಯಲ್ಲಿ ವಾಸಿಸುವ ಕುಟುಂಬವೊಂದರ ಸದಸ್ಯರು ಈ ಅಮಾನವೀಯ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಮನೆ ಬಾಗಿಲಿಗೆ ಬರುವ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ಬಲವಂತವಾಗಿ ನೀಡಲಾಗಿದೆ. ಸಾಕು ನಾಯಿ ಮನೆ ಬಿಟ್ಟು ಹೋಗಲು ಕೇಳದಿದ್ದರೂ ಅದನ್ನು ಬಲವಂತವಾಗಿ ಎಳೆದೊಯ್ಯುವ ದೃಶ್ಯ ವೀಡಿಯೊದಲ್ಲಿ ಕಂಡು ಬಂದಿದೆ. ವಿಶೇಷವೆಂದರೆ ತ್ಯಾಜ್ಯ ಸಂಗ್ರಹಕರು ಕೂಡ ನಾಯಿಯನ್ನು ಸ್ವೀಕರಿಸಲು ನಿರಾಕರಿಸದೆ ಅದನ್ನು ಕೂಡ ತ್ಯಾಜ್ಯವೆಂದು ಪರಿಗಣಿಸಿ ಕೊಂಡೊಯ್ದಿದ್ದಾರೆ.


ಈ ಘಟನೆಯನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿದೆ.
ವೀಡಿಯೊ ವೈರಲ್ ಆಗುತ್ತಿದ್ದಂತೆ
ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಪಶುಪಾಲನೆ ಇಲಾಖೆ ಮಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್‌ ನೀಡಿದೆ. ತ್ಯಾಜ್ಯ ವಿಲೇವಾರಿ ವಾಹನ ಕೊಂಡೊಯ್ದಿದ್ದ ಶ್ವಾನವನ್ನು ಪಚ್ಚನಾಡಿ ಡಂಪಿಂಗ್ ಪ್ರದೇಶದಲ್ಲಿ ಬಿಡಲಾಗಿದೆ. ಆದರೆ ಶ್ವಾನ ಇನ್ನೂ ಪತ್ತೆಯಾಗಿಲ್ಲ. ಪಚ್ಚನಾಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕುವ ಕೆಲಸ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು