10:00 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ

ಇತ್ತೀಚಿನ ಸುದ್ದಿ

ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್ ಆಗಿ ಘಟನೆ ಬೆಳಕಿಗೆ

11/09/2024, 18:21

ಮಂಗಳೂರು(reporterkarnataka.com): ಜೀವಂತ ಸಾಕು ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನ ನೀಡಿದ ಅಘಾತಕ್ಕಾರಿ ಘಟನೆಯೊಂದು ಬುದ್ದಿವಂತರ ಜಿಲ್ಲೆ ಎನಿಸಿಕೊಂಡ ದ.ಕ. ಜಿಲ್ಲೆಯ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಡೊಂಗರಕೇರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಲವಂತವಾಗಿ ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ಎಳೆದೊಯ್ಯುವ ವೀಡಿಯೊವೊಂದು ವೈರಲ್ ಆಗುವ ಮೂಲಕ ಇಡೀ ಘಟನೆ 2 ದಿನಗಳ ಬಳಿಕ ಬೆಳಕಿಗೆ ಬಂದಿದೆ.
ಡೊಂಗರಕೇರಿಯಲ್ಲಿ ವಾಸಿಸುವ ಕುಟುಂಬವೊಂದರ ಸದಸ್ಯರು ಈ ಅಮಾನವೀಯ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಮನೆ ಬಾಗಿಲಿಗೆ ಬರುವ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ಬಲವಂತವಾಗಿ ನೀಡಲಾಗಿದೆ. ಸಾಕು ನಾಯಿ ಮನೆ ಬಿಟ್ಟು ಹೋಗಲು ಕೇಳದಿದ್ದರೂ ಅದನ್ನು ಬಲವಂತವಾಗಿ ಎಳೆದೊಯ್ಯುವ ದೃಶ್ಯ ವೀಡಿಯೊದಲ್ಲಿ ಕಂಡು ಬಂದಿದೆ. ವಿಶೇಷವೆಂದರೆ ತ್ಯಾಜ್ಯ ಸಂಗ್ರಹಕರು ಕೂಡ ನಾಯಿಯನ್ನು ಸ್ವೀಕರಿಸಲು ನಿರಾಕರಿಸದೆ ಅದನ್ನು ಕೂಡ ತ್ಯಾಜ್ಯವೆಂದು ಪರಿಗಣಿಸಿ ಕೊಂಡೊಯ್ದಿದ್ದಾರೆ.


ಈ ಘಟನೆಯನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿದೆ.
ವೀಡಿಯೊ ವೈರಲ್ ಆಗುತ್ತಿದ್ದಂತೆ
ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಪಶುಪಾಲನೆ ಇಲಾಖೆ ಮಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್‌ ನೀಡಿದೆ. ತ್ಯಾಜ್ಯ ವಿಲೇವಾರಿ ವಾಹನ ಕೊಂಡೊಯ್ದಿದ್ದ ಶ್ವಾನವನ್ನು ಪಚ್ಚನಾಡಿ ಡಂಪಿಂಗ್ ಪ್ರದೇಶದಲ್ಲಿ ಬಿಡಲಾಗಿದೆ. ಆದರೆ ಶ್ವಾನ ಇನ್ನೂ ಪತ್ತೆಯಾಗಿಲ್ಲ. ಪಚ್ಚನಾಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕುವ ಕೆಲಸ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು