9:32 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್ ಆಗಿ ಘಟನೆ ಬೆಳಕಿಗೆ

11/09/2024, 18:21

ಮಂಗಳೂರು(reporterkarnataka.com): ಜೀವಂತ ಸಾಕು ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನ ನೀಡಿದ ಅಘಾತಕ್ಕಾರಿ ಘಟನೆಯೊಂದು ಬುದ್ದಿವಂತರ ಜಿಲ್ಲೆ ಎನಿಸಿಕೊಂಡ ದ.ಕ. ಜಿಲ್ಲೆಯ ಮಂಗಳೂರಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ಡೊಂಗರಕೇರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬಲವಂತವಾಗಿ ನಾಯಿಯನ್ನು ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ಎಳೆದೊಯ್ಯುವ ವೀಡಿಯೊವೊಂದು ವೈರಲ್ ಆಗುವ ಮೂಲಕ ಇಡೀ ಘಟನೆ 2 ದಿನಗಳ ಬಳಿಕ ಬೆಳಕಿಗೆ ಬಂದಿದೆ.
ಡೊಂಗರಕೇರಿಯಲ್ಲಿ ವಾಸಿಸುವ ಕುಟುಂಬವೊಂದರ ಸದಸ್ಯರು ಈ ಅಮಾನವೀಯ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಮನೆ ಬಾಗಿಲಿಗೆ ಬರುವ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಜೀವಂತ ನಾಯಿಯನ್ನು ಬಲವಂತವಾಗಿ ನೀಡಲಾಗಿದೆ. ಸಾಕು ನಾಯಿ ಮನೆ ಬಿಟ್ಟು ಹೋಗಲು ಕೇಳದಿದ್ದರೂ ಅದನ್ನು ಬಲವಂತವಾಗಿ ಎಳೆದೊಯ್ಯುವ ದೃಶ್ಯ ವೀಡಿಯೊದಲ್ಲಿ ಕಂಡು ಬಂದಿದೆ. ವಿಶೇಷವೆಂದರೆ ತ್ಯಾಜ್ಯ ಸಂಗ್ರಹಕರು ಕೂಡ ನಾಯಿಯನ್ನು ಸ್ವೀಕರಿಸಲು ನಿರಾಕರಿಸದೆ ಅದನ್ನು ಕೂಡ ತ್ಯಾಜ್ಯವೆಂದು ಪರಿಗಣಿಸಿ ಕೊಂಡೊಯ್ದಿದ್ದಾರೆ.


ಈ ಘಟನೆಯನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿದೆ.
ವೀಡಿಯೊ ವೈರಲ್ ಆಗುತ್ತಿದ್ದಂತೆ
ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಪಶುಪಾಲನೆ ಇಲಾಖೆ ಮಂಗಳೂರು ಮಹಾನಗರ ಪಾಲಿಕೆಗೆ ನೋಟಿಸ್‌ ನೀಡಿದೆ. ತ್ಯಾಜ್ಯ ವಿಲೇವಾರಿ ವಾಹನ ಕೊಂಡೊಯ್ದಿದ್ದ ಶ್ವಾನವನ್ನು ಪಚ್ಚನಾಡಿ ಡಂಪಿಂಗ್ ಪ್ರದೇಶದಲ್ಲಿ ಬಿಡಲಾಗಿದೆ. ಆದರೆ ಶ್ವಾನ ಇನ್ನೂ ಪತ್ತೆಯಾಗಿಲ್ಲ. ಪಚ್ಚನಾಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕುವ ಕೆಲಸ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು