8:49 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

11/09/2024, 19:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಶಿರಮಳ್ಳಿ ಗ್ರಾಮದಲ್ಲಿ ಉಪ್ಪಾರ ಭಗೀರಥ ಸಮುದಾಯ ಭವನ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕ ದರ್ಶನ್ ದ್ರುವ ನಾರಾಯಣ್ ಇಂದು ಭೂಮಿ ಪೂಜೆ ನೆರವೇರಿಸಿದರು.
ಗ್ರಾಮದ ಉಪ್ಪಾರ ಭಗೀರಥ ಸಮುದಾಯ ಭವನಕ್ಕೆ ಮುಂದುವರಿದ ಕಾಮಗಾರಿಗಾಗಿ 5 ಲಕ್ಷ ಹಾಗೂ ಕನಕ ಸಮುದಾಯ ಭವನದ ನೂತನ ಕಟ್ಟಡಕ್ಕೆ 5 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಯಿತು.


ಗ್ರಾಮಕ್ಕೆ ಬಂದ ಶಾಸಕರು ಮತ್ತು ಮಾಜಿ ಶಾಸಕರಿಗೆ ಗ್ರಾಮಸ್ಥರು ಮಾಲಾರ್ಪಣೆ ಮಾಡಿ ಗೌರವಿಸಿದರು. ಭೂಮಿ ಪೂಜೆ ನೆರವೇರಿಸಿ ಶಾಸಕ ದರ್ಶನ್ ದ್ರುವನಾರಾಯಣ್ ಮಾತನಾಡಿ ಚುನಾವಣಾ ಸಂದರ್ಭದಲ್ಲಿ ನಿಮಗೆ ಕೊಟ್ಟ ಮಾತಿನಂತೆ ಇಂದು ನಿಮ್ಮ ಗ್ರಾಮದಲ್ಲಿ ಎರಡೂ ಸಮುದಾಯದ ಭವನನಗಳಿಗೆ ಹಣ ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದೆ ಇದಕ್ಕೆ ಇನ್ನೂ ಹೆಚ್ಚಿನ ಹಣ ಬಿಡುಗಡೆ ಮಾಡುತ್ತೇನೆ. ತಮ್ಮೆಲ್ಲರ ಸಹಕಾರ ಮುಂದೆಯೂ ಹೀಗೆ ಇರಲಿ ಎಂದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯ ಸ್ವಾಮಿ, ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ ಶಂಕರ್ ಮುಖಂಡರಾದ ಮಾರುತಿ ರಾಜು ಸ್ವಾಮಿ ಗೌಡ, ಪುಟ್ಟಸ್ವಾಮಿಗೌಡ,ಬೆಳ್ಳಶೆಟ್ಟಿ, ಶಿವಣ್ಣ ಶೆಟ್ಟಿ,ಮೊಳ್ಳೇಗೌಡ, ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು