7:34 AM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

11/09/2024, 19:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಶಿರಮಳ್ಳಿ ಗ್ರಾಮದಲ್ಲಿ ಉಪ್ಪಾರ ಭಗೀರಥ ಸಮುದಾಯ ಭವನ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕ ದರ್ಶನ್ ದ್ರುವ ನಾರಾಯಣ್ ಇಂದು ಭೂಮಿ ಪೂಜೆ ನೆರವೇರಿಸಿದರು.
ಗ್ರಾಮದ ಉಪ್ಪಾರ ಭಗೀರಥ ಸಮುದಾಯ ಭವನಕ್ಕೆ ಮುಂದುವರಿದ ಕಾಮಗಾರಿಗಾಗಿ 5 ಲಕ್ಷ ಹಾಗೂ ಕನಕ ಸಮುದಾಯ ಭವನದ ನೂತನ ಕಟ್ಟಡಕ್ಕೆ 5 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಯಿತು.


ಗ್ರಾಮಕ್ಕೆ ಬಂದ ಶಾಸಕರು ಮತ್ತು ಮಾಜಿ ಶಾಸಕರಿಗೆ ಗ್ರಾಮಸ್ಥರು ಮಾಲಾರ್ಪಣೆ ಮಾಡಿ ಗೌರವಿಸಿದರು. ಭೂಮಿ ಪೂಜೆ ನೆರವೇರಿಸಿ ಶಾಸಕ ದರ್ಶನ್ ದ್ರುವನಾರಾಯಣ್ ಮಾತನಾಡಿ ಚುನಾವಣಾ ಸಂದರ್ಭದಲ್ಲಿ ನಿಮಗೆ ಕೊಟ್ಟ ಮಾತಿನಂತೆ ಇಂದು ನಿಮ್ಮ ಗ್ರಾಮದಲ್ಲಿ ಎರಡೂ ಸಮುದಾಯದ ಭವನನಗಳಿಗೆ ಹಣ ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದೆ ಇದಕ್ಕೆ ಇನ್ನೂ ಹೆಚ್ಚಿನ ಹಣ ಬಿಡುಗಡೆ ಮಾಡುತ್ತೇನೆ. ತಮ್ಮೆಲ್ಲರ ಸಹಕಾರ ಮುಂದೆಯೂ ಹೀಗೆ ಇರಲಿ ಎಂದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯ ಸ್ವಾಮಿ, ಬ್ಲಾಕ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶ್ರೀಕಂಠ ನಾಯಕ ಶಂಕರ್ ಮುಖಂಡರಾದ ಮಾರುತಿ ರಾಜು ಸ್ವಾಮಿ ಗೌಡ, ಪುಟ್ಟಸ್ವಾಮಿಗೌಡ,ಬೆಳ್ಳಶೆಟ್ಟಿ, ಶಿವಣ್ಣ ಶೆಟ್ಟಿ,ಮೊಳ್ಳೇಗೌಡ, ಸೇರಿದಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು