12:14 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ರಾಜ್ಯ ಸರಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್: ಬೃಹತ್ ಪ್ರತಿಭಟನಾ ಮೆರವಣಿಗೆ

11/09/2024, 19:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ತಾಲೂಕು ಒತ್ತುವರಿ ಹೋರಾಟ ಸಮಿತಿ ನೇತೃತ್ವದಲ್ಲಿ
ರಾಜ್ಯ ಸರ್ಕಾರದ ಒತ್ತುವರಿ ತೆರವು ಖಂಡಿಸಿ ಕಳಸ ತಾಲೂಕು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಅಂಗಡಿ-ಮುಂಗಟ್ಟುಗಳನ್ನ ಮುಚ್ಚಿ ವರ್ತಕರು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು. ರೈತರ ಹೋರಾಟಕ್ಕೆ ಸರ್ವ ಪಕ್ಷಗಳು ಸಾಥ್ ನೀಡಿದ್ದವು.


ಕನ್ನಡ, ದಲಿತ ಸಂಘಟನೆ ಸೇರಿ ಬಹುತೇಕ ಸಂಘಟನೆಗಳ ಬೆಂಬಲ ವ್ಯಕ್ತಪಡಿಸಿದ್ದವು.
ಬೆಳಗ್ಗೆ 10 ಗಂಟೆಗೆ ಕಳಸ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದಂತೆ ಆ ಮಾರ್ಗವಾಗಿ ಹೈಕೋರ್ಟ್ ನ್ಯಾಯಾಧೀಶರೊಬ್ಬರು ಹೊರನಾಡು ದೇಗುಲಕ್ಕೆ ತೆರಳವುದನ್ನು ಕಂಡು ಪ್ರತಿಭಟನಾಕಾರರು ನಮ್ಮ ನೋವು ನ್ಯಾಯಾಧೀಶರಿಗೂ ಕೇಳಲಿ ಎಂದರು.
ಬದುಕಿಗಾಗಿ ಮಾಡಿರುವ 2-3 ಎಕರೆ ಒತ್ತುವರಿಯೇ ಹೆಚ್ಚಾಗಿದೆಯೇ? ಒತ್ತುವರಿ ತೆರವು ಮಾಡಿದ್ರೆ ಸಾವಿರಾರು ಕುಟುಂಬಗಳು ಬೀದಿಗೆ ಬರಲಿವೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು. ತಾಲೂಕಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು