12:42 PM Monday29 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ದ.ಕ.: ಒಟ್ಟು 130 ಕಿ.ಮೀ. ಉದ್ದದ ಮಾನವ ಸರಪಳಿಗೆ ಸಾಕ್ಷಿಯಾಗಲಿದೆ ಸೆ. 15; ಸುಮಾರು 1 ಲಕ್ಷಕ್ಕೂ ಅಧಿಕ ಮಂದಿ ಭಾಗಿ

13/09/2024, 21:19

ಮಂಗಳೂರು(reporterkarnataka.com): ಸೆಪ್ಟೆಂಬರ್ 15ರಂದು ನಡೆಯುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲೆಯಲ್ಲಿ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲಾಗುವುದು.
ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 130 ಕಿ.ಮೀ. ಸಾಗಲಿರುವ ಈ ಮಾನವ ಸರಪಳಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ. ಮೂಲ್ಕಿ-ಸುರತ್ಕಲ್-ಬೈಕಂಪಾಡಿ-ನಂತೂರು-ಪಡೀಲ್-ಬಿ.ಸಿ.ರೋಡು-ಪುತ್ತೂರು-ಸುಳ್ಯ ಮಾರ್ಗದಲ್ಲಿ ಮಾನವ ಸರಪಳಿ ಸಾಗಲಿದೆ.ಭಾನುವಾರ ಬೆಳಿಗ್ಗೆ 9.30ರಿಂದ 9:37 ರವರೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರು ಸರತಿ ಸಾಲಿನಲ್ಲಿ ನಿಲ್ಲಬೇಕು. 9:37ರಿಂದ 9.40 ರವರೆಗೆ ನಾಡಗೀತೆ, 9.41ರಿಂದ 9:55ರ ವರೆಗೆ ಮುಖ್ಯ ಅತಿಥಿಗಳಿಂದ ಭಾಷಣ, 9:55ರಿಂದ 9:57ರವರೆಗೆ ಸಂವಿಧಾನ ಪ್ರಸ್ತಾವನೆ ಓದುವುದು, 9:57 ರಿಂದ 9:59 ರವರೆಗೆ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಲ್ಲುವುದು. ಬೆಳಿಗ್ಗೆ 10 ಗಂಟೆಗೆ ಮಾನವ ಸರಪಳಿಯಲ್ಲಿಯೇ ತಮ್ಮ ಎರಡು ಕೈಗಳನ್ನು ಮೇಲೆತ್ತಿ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿಯನ್ನು ಕಳಚಲಿದ್ದಾರೆ.
ಈಗಾಗಲೇ ಈ ಬೃಹತ್ ಮಾನವ ಸರಪಳಿಗೆ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿದೆ. ವಿದ್ಯಾರ್ಥಿಗಳು, ಯುವಜನರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿ ಸಿಬ್ಬಂಧಿಗಳು ಸೇರಿದಂತೆ ಸಾರ್ವಜನಿಕರು ಈ ಮಾನವ ಸರಪಳಿಯಲ್ಲಿ ಭಾಗವಹಿಸಲಿದ್ದಾರೆ.
ಸುಗಮ ಸಂಚಾರಕ್ಕಾಗಿ ಹಾಗೂ ಸಂಚಾರ ನಿಯಂತ್ರಣಕ್ಕಾಗಿ ಹೆಚ್ಚಿನ ಬಂದೋಬಸ್ತ್ ಮತ್ತು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು