10:02 AM Sunday5 - May 2024
ಬ್ರೇಕಿಂಗ್ ನ್ಯೂಸ್
ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ…

ಇತ್ತೀಚಿನ ಸುದ್ದಿ

ಜೋಕಟ್ಟೆ : ರೈಲಿನಡಿಗೆ ಬೀಳುತ್ತಿದ್ದ ಆಡನ್ನು ರಕ್ಷಿಸಲು ಹೋದ ಯುವಕನ ಕಾಲಿನ ಮೇಲೆಯೆ ಹರಿಯಿತು ರೈಲು

28/08/2021, 21:40

ಮಂಗಳೂರು(ReporterKarnataka.com)

ರೈಲು ಹಳಿ ದಾಟುತ್ತಿರುವಾಗ ದೂರದಲ್ಲಿ ರೈಲು ಬರುತ್ತಿರುವುದು ಗಮನಿಸಿ ಅಲ್ಲೆ ಓಡಾಡುತ್ತಿದ್ದ ಆಡು ಮರಿಯನ್ನು ರಕ್ಷಿಸಲು ಹೋದ ಯವಕನ ಎರಡೂ ಕಾಲುಗಳು ತುಂಡಾಗಿ ಬಿದ್ದ ಘಟನೆ ಶನಿವಾರ ಜೋಕಟ್ಟೆ ಸಮೀಪ ನಡೆದಿದೆ.

ಚೇತನ್ ಕುಮಾರ್ ಎನ್ನುವ 21ರ ಹರೆಯದ ಯುವಕ ತನ್ನ ಪ್ರಾಣಿ ಪ್ರೇಮದಿಂದ ತನ್ನ ಪ್ರಾಣವನ್ನೇ ಪಣಕಿಟ್ಟಿದ್ದಾನೆ. ಸಣ್ಣ ಪ್ರಾಯದಲ್ಲೇ ಬಸ್ ಕ್ಲೀನರ್ ಕೆಲಸ ಮಾಡುತ್ತಲೇ ಕಷ್ಟದಲ್ಲಿ ಕಾಲೇಜು ಓದಿದ್ದ ಯುವಕ ಒಂದೂವರೆ ವರ್ಷದಿಂದ ಬಸ್ ಕಂಡಕ್ಟರನಾಗಿ ಸೇರಿಕೊಂಡಿದ್ದ. ಮನೆಯ ಐದು ಮಕ್ಕಳಲ್ಲಿ ಹಿರಿಯವನಾಗಿದ್ದ ಈತನ ದುಡಿಮೆಯಿಂದಲೇ ಕುಟುಂಬ ಸಾಗುತ್ತಿತ್ತು.

ಚೇತನ್ ಕುಮಾರ್ ಮನೆ ಇರುವುದು ಮಂಗಳೂರು ಹೊರವಲಯದ ಬೈಕಂಪಾಡಿ ಬಳಿಯ ಜೋಕಟ್ಟೆ ಸಮೀಪದ ಅಂಗರಗುಂಡಿ ಎಂಬಲ್ಲಿ. ಹೆದ್ದಾರಿಯಿಂದ ಮನೆಗೆ ತೆರಳಬೇಕಿದ್ದರೆ ಮೂರು ಕಿಮೀ ನಡೆಯಬೇಕಿತ್ತು. ದಿನವೂ ಬೆಳಗ್ಗೆ ಮೂರು ಕಿಮೀ ನಡೆದುಕೊಂಡೇ ಜೋಕಟ್ಟೆಯ ರೈಲು ಹಳಿಯನ್ನು ದಾಟಿಕೊಂಡು ಕೆಲಸಕ್ಕೆ ಬರುತ್ತಿದ್ದ. ಇಂದು ವೀಕೆಂಡ್ ಲಾಕ್ಡೌನ್ ಇದ್ದ ಕಾರಣ ಬಸ್ಸಿಗೆ ಜನ ಇರಲ್ಲ ಎಂದುಕೊಂಡು ತಡವಾಗಿ ಬಸ್ ಬಿಡಲು ನಿರ್ಧರಿಸಿದ್ದರು.

ಹಾಗಾಗಿ ಬೆಳಗ್ಗೆ 8.30ರ ಸುಮಾರಿಗೆ ನಡೆದುಕೊಂಡು ಬಂದು ಜೋಕಟ್ಟೆಯ ರೈಲು ಹಳಿ ದಾಟುತ್ತಿದ್ದಾಗ, ಅಲ್ಲೊಂದು ಆಡು ಮರಿ ಹಳಿಯ ಉದ್ದಕ್ಕೂ ಓಡುವುದು ಕಾಣಿಸಿತ್ತು. ಅದೇ ಸಂದರ್ಭದಲ್ಲಿ ದೂರದಲ್ಲಿ ರೈಲು ಬರುತ್ತಿದ್ದುದನ್ನು ಗಮನಿಸಿದ ಚೇತನ್ ಕುಮಾರ್, ಆಡು ಮರಿಯ ರಕ್ಷಣೆಗೆ ಧಾವಿಸಿದ್ದಾನೆ. ಓಡುತ್ತಲೇ ಆಡಿನ ಮರಿಯನ್ನು ಹೊರಕ್ಕೆ ದೂಡಿದ ಚೇತನ್ ಕುಮಾರ್ ಹಳಿಯಿಂದ ಹೊರಬೀಳುವಷ್ಟರಲ್ಲಿ ರೈಲು ಧಾವಿಸಿ ಬಂದಿದೆ. ಚೇತನ್ ಕಾಲಿನ ಮೇಲಿಂದಲೇ ರೈಲು ಹರಿದು ಹೋಗಿದ್ದು, ಎರಡೂ ಕಾಲುಗಳು ತುಂಡಾಗಿವೆ.

ಕೂಡಲೇ ಆತನನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಪರಿಶೀಲಿಸಿ ಎರಡೂ ಕಾಲು ತುಂಡಾಗಿರುವುದನ್ನು ತಿಳಿಸಿದ್ದಾರೆ. ಯುವಕನ ದುಡಿಮೆಯಿಂದಲೇ ಬದುಕುತ್ತಿದ್ದ ಬಡ ಕುಟುಂಬಕ್ಕೆ ಈ ಘಟನೆಯಿಂದ ದಿಕ್ಕೇ ತೋಚದಂತಾಗಿದೆ.

ಇಬ್ಬರು ತಮ್ಮಂದಿರು ಮತ್ತು ಇಬ್ಬರು ತಂಗಿಯರು ಶಾಲೆ, ಕಾಲೇಜು ಕಲಿಯುತ್ತಿದ್ದಾರೆ. ತಂದೆ, ತಾಯಿ ಮತ್ತು ಇತರ ಮಕ್ಕಳಿಗೆಲ್ಲ ಅಣ್ಣನ ದುಡಿಮೆಯೇ ಆಧಾರವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು