7:38 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ: ಡಾ. ಎಡ್ವರ್ಡ್ ನಜ್ರೆತ್‌ ಅವರಿಗೆ ಸನ್ಮಾನ

16/09/2024, 15:22

ಮಂಗಳೂರು(reporterkarnataka.com): ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ನಗರದ ಸಂದೇಶ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿತ್ತು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಸ್ಟ್ಯಾನಿ ಆಲ್ವಾರೆಸ್ ಮುಖ್ಯ ಅತಿಥಿಗಳಾಗಿದ್ದು, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಮೈಕೆಲ್ ಸಾಂತುಮಯೆರ್ ಅಧ್ಯಕ್ಷತೆ ವಹಿಸಿದ್ದರು. ಕೊಂಕಣಿಯ ನಿಯತಕಾಲಿಕಗಳಲ್ಲಿ ಕಳೆದ 50 ವರ್ಷಗಳಿಂದ ಜನಸಾಮನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನ ಮತ್ತು ಸಣ್ಣಕಥೆಗಳನ್ನು ಬರೆಯುತ್ತಿರುವ ಡಾ. ಎಡ್ವರ್ಡ್ ನಜ್ರೆತ್‌ರವರ 5 ಸಣ್ಣಕತೆಗಳ ಸಂಗೃಹ, ಆರೋಗ್ಯದ ಕುರಿತಾದ 10 ಪುಸ್ತಕ ಮತ್ತು 2 ಕಾದಂಬರಿಗಳು ಪ್ರಕಟವಾಗಿವೆ. ಅವರ ಸಾಹಿತ್ಯದ ಕುರಿತು ಹಿರಿಯ ಲೇಖಕ ಡೊಲ್ಫಿಲೋಬೊ ಮತ್ತು ಲೇಖಕಿ ಲವಿನಾ ಮಸ್ಕರೇನಸ್ (ಲವಿ, ಗಂಜಿಮಟ)ರವರು ಪ್ರಬಂಧ ಮಂಡಿಸಿದರು. ಕೊಂಕಣಿ ಲೇಖಕರ ಸಂಘದ ಸಂಚಾಲಕರಾಗಿರುವ ರಿಚ್ಚರ್ಡ್ ಮೊರಾಸ್ ಸ್ವಾಗತಿಸಿ, ಎಡ್ಮಂಡ್ ನೊರೊನ್ಹಾ ವಂದಿಸಿದರು. ಶ್
ಪ್ಲಾವಿಯಾ ಆಲ್ಬುಕರ್ಕ್ ಅವರು ಕೊಂಕಣಿಗೆ ಭಾಷಾಂತರಿಸಿದ ’ರೆಗಿಸ್ಥಾನಚೆಂ ಫುಲ್’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಹೆನ್ರಿ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು