9:59 PM Wednesday2 - April 2025
ಬ್ರೇಕಿಂಗ್ ನ್ಯೂಸ್
EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ…

ಇತ್ತೀಚಿನ ಸುದ್ದಿ

ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ: ಡಾ. ಎಡ್ವರ್ಡ್ ನಜ್ರೆತ್‌ ಅವರಿಗೆ ಸನ್ಮಾನ

16/09/2024, 15:22

ಮಂಗಳೂರು(reporterkarnataka.com): ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ನಗರದ ಸಂದೇಶ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿತ್ತು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಸ್ಟ್ಯಾನಿ ಆಲ್ವಾರೆಸ್ ಮುಖ್ಯ ಅತಿಥಿಗಳಾಗಿದ್ದು, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಮೈಕೆಲ್ ಸಾಂತುಮಯೆರ್ ಅಧ್ಯಕ್ಷತೆ ವಹಿಸಿದ್ದರು. ಕೊಂಕಣಿಯ ನಿಯತಕಾಲಿಕಗಳಲ್ಲಿ ಕಳೆದ 50 ವರ್ಷಗಳಿಂದ ಜನಸಾಮನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನ ಮತ್ತು ಸಣ್ಣಕಥೆಗಳನ್ನು ಬರೆಯುತ್ತಿರುವ ಡಾ. ಎಡ್ವರ್ಡ್ ನಜ್ರೆತ್‌ರವರ 5 ಸಣ್ಣಕತೆಗಳ ಸಂಗೃಹ, ಆರೋಗ್ಯದ ಕುರಿತಾದ 10 ಪುಸ್ತಕ ಮತ್ತು 2 ಕಾದಂಬರಿಗಳು ಪ್ರಕಟವಾಗಿವೆ. ಅವರ ಸಾಹಿತ್ಯದ ಕುರಿತು ಹಿರಿಯ ಲೇಖಕ ಡೊಲ್ಫಿಲೋಬೊ ಮತ್ತು ಲೇಖಕಿ ಲವಿನಾ ಮಸ್ಕರೇನಸ್ (ಲವಿ, ಗಂಜಿಮಟ)ರವರು ಪ್ರಬಂಧ ಮಂಡಿಸಿದರು. ಕೊಂಕಣಿ ಲೇಖಕರ ಸಂಘದ ಸಂಚಾಲಕರಾಗಿರುವ ರಿಚ್ಚರ್ಡ್ ಮೊರಾಸ್ ಸ್ವಾಗತಿಸಿ, ಎಡ್ಮಂಡ್ ನೊರೊನ್ಹಾ ವಂದಿಸಿದರು. ಶ್
ಪ್ಲಾವಿಯಾ ಆಲ್ಬುಕರ್ಕ್ ಅವರು ಕೊಂಕಣಿಗೆ ಭಾಷಾಂತರಿಸಿದ ’ರೆಗಿಸ್ಥಾನಚೆಂ ಫುಲ್’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಹೆನ್ರಿ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು