1:44 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಕೊಂಕಣಿ ಸಾಹಿತ್ಯದಲ್ಲಿ ಸುವರ್ಣ ಪಯಣದ ಸಂಭ್ರಮ: ಡಾ. ಎಡ್ವರ್ಡ್ ನಜ್ರೆತ್‌ ಅವರಿಗೆ ಸನ್ಮಾನ

16/09/2024, 15:22

ಮಂಗಳೂರು(reporterkarnataka.com): ನಗರದ ಖ್ಯಾತ ಮೂಳೆ ರೋಗ ತಜ್ಞ ಹಾಗೂ ಮುಕ್ಕದ ಶ್ರಿನಿವಾಸ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರೊಫೆಸರ್ ಆಗಿರುವ ಡಾ. ಎಡ್ವರ್ಡ್ ನಜ್ರೆತ್‌ರವರು ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ 50 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಅವರನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಕರ್ನಾಟಕ ಕೊಂಕಣಿ ಲೇಖಕರ ಸಂಘವು ನಗರದ ಸಂದೇಶ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿತ್ತು.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಸ್ಟ್ಯಾನಿ ಆಲ್ವಾರೆಸ್ ಮುಖ್ಯ ಅತಿಥಿಗಳಾಗಿದ್ದು, ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಮೈಕೆಲ್ ಸಾಂತುಮಯೆರ್ ಅಧ್ಯಕ್ಷತೆ ವಹಿಸಿದ್ದರು. ಕೊಂಕಣಿಯ ನಿಯತಕಾಲಿಕಗಳಲ್ಲಿ ಕಳೆದ 50 ವರ್ಷಗಳಿಂದ ಜನಸಾಮನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಆರೋಗ್ಯಕ್ಕೆ ಸಂಬಂಧಪಟ್ಟ ಲೇಖನ ಮತ್ತು ಸಣ್ಣಕಥೆಗಳನ್ನು ಬರೆಯುತ್ತಿರುವ ಡಾ. ಎಡ್ವರ್ಡ್ ನಜ್ರೆತ್‌ರವರ 5 ಸಣ್ಣಕತೆಗಳ ಸಂಗೃಹ, ಆರೋಗ್ಯದ ಕುರಿತಾದ 10 ಪುಸ್ತಕ ಮತ್ತು 2 ಕಾದಂಬರಿಗಳು ಪ್ರಕಟವಾಗಿವೆ. ಅವರ ಸಾಹಿತ್ಯದ ಕುರಿತು ಹಿರಿಯ ಲೇಖಕ ಡೊಲ್ಫಿಲೋಬೊ ಮತ್ತು ಲೇಖಕಿ ಲವಿನಾ ಮಸ್ಕರೇನಸ್ (ಲವಿ, ಗಂಜಿಮಟ)ರವರು ಪ್ರಬಂಧ ಮಂಡಿಸಿದರು. ಕೊಂಕಣಿ ಲೇಖಕರ ಸಂಘದ ಸಂಚಾಲಕರಾಗಿರುವ ರಿಚ್ಚರ್ಡ್ ಮೊರಾಸ್ ಸ್ವಾಗತಿಸಿ, ಎಡ್ಮಂಡ್ ನೊರೊನ್ಹಾ ವಂದಿಸಿದರು. ಶ್
ಪ್ಲಾವಿಯಾ ಆಲ್ಬುಕರ್ಕ್ ಅವರು ಕೊಂಕಣಿಗೆ ಭಾಷಾಂತರಿಸಿದ ’ರೆಗಿಸ್ಥಾನಚೆಂ ಫುಲ್’ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಹೆನ್ರಿ ಮಸ್ಕರೇನಸ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು