8:41 PM Friday10 - July 2026
ಬ್ರೇಕಿಂಗ್ ನ್ಯೂಸ್
ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ…

ಇತ್ತೀಚಿನ ಸುದ್ದಿ

ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ: ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

16/09/2024, 15:36

ಬಂಟ್ವಾಳ(reporterkarnataka.com): ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ ವಲಯದ ವತಿಯಿಂದ ಸಾರ್ವಜನಿಕ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಮಹಾವೀರ ಜೈನ್ ನೇತೃತ್ವದಲ್ಲಿ ಎರಡನೇ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆ ನಡೆಯಿತು.


ಸಭೆಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ಬಿ. ರಮಾನಾಥ ರೈ ಅವರು 6ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ರೂಪು ರೇಷೆಗಳನ್ನು ಚರ್ಚಿಸಿದರು.
ಪ್ರಧಾನ ಸಂಚಾಲಕ ಜಗದೀಶ್ ಕೊಯ್ಲ ಕಾರ್ಯಕ್ರಮದ ಕುಂದು ಕೊರತೆಗಳು ಬಾರದಂತೆ ಸವಿಸ್ತಾರವಾಗಿ ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು,
ಅಧ್ಯಕ್ಷ ಮಹಾವೀರ್ ಜೈನ್ ನಡ್ಯೋಡಿ ಗುತ್ತು, ರಮೇಶ್ ಮಾಸ್ಟರ್ ರಾಯಿ, ರಾಮಚಂದ್ರ ಶೆಟ್ಟಿಗಾರ್, ಅನ್ನಲಿಕ್ಕೆ ಗೋಪಾಲ್ ಬಂಗೇರ ಉಳಿರೋಡಿ ಒಂದೆರಡು ಹಿತನುಡಿಗಳನ್ನ ನುಡಿದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಕೂತ್ಲೋಡಿ, ಕೋಶಾಧಿಕಾರಿ ದಾಮೋದರ್ ಪಿ ದೋಟ, ಮಹಿಳಾ ಅಧ್ಯಕ್ಷೆ ಶಕುಂತಲಾ ಆಚಾರ್ಯ, ಕಾರ್ಯದರ್ಶಿ, ಹೇಮಾ ಶೆಟ್ಟಿಗಾರ್ , ಬಾಬು ಶೆಟ್ಟಿ , ಗುಮ್ಮಣ್ಣ ನಾಯ್ಕ ಹಾಗೂ ಎಲ್ಲಾ ಸಂಚಾಲಕರು ಪದಾಧಿಕಾರಿಗಳು ಸದಸ್ಯರು ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಹಲವು ವಿಚಾರಗಳನ್ನ ಚರ್ಚಿಸಿ ಈ ವರ್ಷದ ಕಾರ್ಯಕ್ರಮವನ್ನ ಹಿಂದಿಗಿಂತಲೂ ಸುಂದರ ಹಾಗೂ ಅಚ್ಚು ಕಟ್ಟಾಗಿ ನಡೆಸಲು ತೀರ್ಮಾನ ಮಾಡಲಾಯಿತು.
ಸಭೆಯಲ್ಲಿ ರಿಕ್ಷಾ ಹಾಗೂ ದ್ವಿ ಚಕ್ರ ವಾಹನಗಳಿಗೆ ಪ್ರಚಾರಕ್ಕಾಗಿ ಸಿದ್ಧಕಟ್ಟೆ ದಸರಾ ಸ್ಟಿಕ್ಕರ್ ಹಂಚಲಾಯಿತು, ಶಾರದಾ ಮಾತೆಯ ಪೂಜೆಯ 10 ರಸೀದಿಗಳ 1 ಬುಕ್ ಪ್ರತಿಯೊಬ್ಬರಿಗೂ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮೀಳಾ ಲೋಕೇಶ್ ಪ್ರಾರ್ಥನೆ ಮಾಡಿದರು. ದಿನೇಶ ಶೆಟ್ಟಿಗಾರ್ ಸ್ವಾಗತಿಸಿದರು. ದಾಮೋದರ್ ಪಿ ದೋಟ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನ ಲಿಖಿತಾ ನಾರ್ಲೊಟ್ಟು ನಿರೂಪಿಸಿ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು