10:31 AM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ: ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

16/09/2024, 15:36

ಬಂಟ್ವಾಳ(reporterkarnataka.com): ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ ವಲಯದ ವತಿಯಿಂದ ಸಾರ್ವಜನಿಕ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಮಹಾವೀರ ಜೈನ್ ನೇತೃತ್ವದಲ್ಲಿ ಎರಡನೇ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆ ನಡೆಯಿತು.


ಸಭೆಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ಬಿ. ರಮಾನಾಥ ರೈ ಅವರು 6ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ರೂಪು ರೇಷೆಗಳನ್ನು ಚರ್ಚಿಸಿದರು.
ಪ್ರಧಾನ ಸಂಚಾಲಕ ಜಗದೀಶ್ ಕೊಯ್ಲ ಕಾರ್ಯಕ್ರಮದ ಕುಂದು ಕೊರತೆಗಳು ಬಾರದಂತೆ ಸವಿಸ್ತಾರವಾಗಿ ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು,
ಅಧ್ಯಕ್ಷ ಮಹಾವೀರ್ ಜೈನ್ ನಡ್ಯೋಡಿ ಗುತ್ತು, ರಮೇಶ್ ಮಾಸ್ಟರ್ ರಾಯಿ, ರಾಮಚಂದ್ರ ಶೆಟ್ಟಿಗಾರ್, ಅನ್ನಲಿಕ್ಕೆ ಗೋಪಾಲ್ ಬಂಗೇರ ಉಳಿರೋಡಿ ಒಂದೆರಡು ಹಿತನುಡಿಗಳನ್ನ ನುಡಿದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಕೂತ್ಲೋಡಿ, ಕೋಶಾಧಿಕಾರಿ ದಾಮೋದರ್ ಪಿ ದೋಟ, ಮಹಿಳಾ ಅಧ್ಯಕ್ಷೆ ಶಕುಂತಲಾ ಆಚಾರ್ಯ, ಕಾರ್ಯದರ್ಶಿ, ಹೇಮಾ ಶೆಟ್ಟಿಗಾರ್ , ಬಾಬು ಶೆಟ್ಟಿ , ಗುಮ್ಮಣ್ಣ ನಾಯ್ಕ ಹಾಗೂ ಎಲ್ಲಾ ಸಂಚಾಲಕರು ಪದಾಧಿಕಾರಿಗಳು ಸದಸ್ಯರು ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಹಲವು ವಿಚಾರಗಳನ್ನ ಚರ್ಚಿಸಿ ಈ ವರ್ಷದ ಕಾರ್ಯಕ್ರಮವನ್ನ ಹಿಂದಿಗಿಂತಲೂ ಸುಂದರ ಹಾಗೂ ಅಚ್ಚು ಕಟ್ಟಾಗಿ ನಡೆಸಲು ತೀರ್ಮಾನ ಮಾಡಲಾಯಿತು.
ಸಭೆಯಲ್ಲಿ ರಿಕ್ಷಾ ಹಾಗೂ ದ್ವಿ ಚಕ್ರ ವಾಹನಗಳಿಗೆ ಪ್ರಚಾರಕ್ಕಾಗಿ ಸಿದ್ಧಕಟ್ಟೆ ದಸರಾ ಸ್ಟಿಕ್ಕರ್ ಹಂಚಲಾಯಿತು, ಶಾರದಾ ಮಾತೆಯ ಪೂಜೆಯ 10 ರಸೀದಿಗಳ 1 ಬುಕ್ ಪ್ರತಿಯೊಬ್ಬರಿಗೂ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮೀಳಾ ಲೋಕೇಶ್ ಪ್ರಾರ್ಥನೆ ಮಾಡಿದರು. ದಿನೇಶ ಶೆಟ್ಟಿಗಾರ್ ಸ್ವಾಗತಿಸಿದರು. ದಾಮೋದರ್ ಪಿ ದೋಟ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನ ಲಿಖಿತಾ ನಾರ್ಲೊಟ್ಟು ನಿರೂಪಿಸಿ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು