7:49 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಸಿದ್ಧಕಟ್ಟೆ ಸಾರ್ವಜನಿಕ ಶ್ರೀ ಶಾರದೋತ್ಸವ: ಪೂರ್ವಭಾವಿ ಸಭೆ, ಆಮಂತ್ರಣ ಪತ್ರಿಕೆ ಬಿಡುಗಡೆ

16/09/2024, 15:36

ಬಂಟ್ವಾಳ(reporterkarnataka.com): ಸಾರ್ವಜನಿಕ ಶ್ರೀ ಶಾರದೋತ್ಸವ ಆಚರಣಾ ಸಮಿತಿ ಸಿದ್ಧಕಟ್ಟೆ ವಲಯದ ವತಿಯಿಂದ ಸಾರ್ವಜನಿಕ ಶಾರದೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಮಹಾವೀರ ಜೈನ್ ನೇತೃತ್ವದಲ್ಲಿ ಎರಡನೇ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಭೆ ನಡೆಯಿತು.


ಸಭೆಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ಬಿ. ರಮಾನಾಥ ರೈ ಅವರು 6ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ರೂಪು ರೇಷೆಗಳನ್ನು ಚರ್ಚಿಸಿದರು.
ಪ್ರಧಾನ ಸಂಚಾಲಕ ಜಗದೀಶ್ ಕೊಯ್ಲ ಕಾರ್ಯಕ್ರಮದ ಕುಂದು ಕೊರತೆಗಳು ಬಾರದಂತೆ ಸವಿಸ್ತಾರವಾಗಿ ಪ್ರಾಸ್ತಾವಿಕ ಭಾಷಣದಲ್ಲಿ ತಿಳಿಸಿದರು,
ಅಧ್ಯಕ್ಷ ಮಹಾವೀರ್ ಜೈನ್ ನಡ್ಯೋಡಿ ಗುತ್ತು, ರಮೇಶ್ ಮಾಸ್ಟರ್ ರಾಯಿ, ರಾಮಚಂದ್ರ ಶೆಟ್ಟಿಗಾರ್, ಅನ್ನಲಿಕ್ಕೆ ಗೋಪಾಲ್ ಬಂಗೇರ ಉಳಿರೋಡಿ ಒಂದೆರಡು ಹಿತನುಡಿಗಳನ್ನ ನುಡಿದರು. ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಕೂತ್ಲೋಡಿ, ಕೋಶಾಧಿಕಾರಿ ದಾಮೋದರ್ ಪಿ ದೋಟ, ಮಹಿಳಾ ಅಧ್ಯಕ್ಷೆ ಶಕುಂತಲಾ ಆಚಾರ್ಯ, ಕಾರ್ಯದರ್ಶಿ, ಹೇಮಾ ಶೆಟ್ಟಿಗಾರ್ , ಬಾಬು ಶೆಟ್ಟಿ , ಗುಮ್ಮಣ್ಣ ನಾಯ್ಕ ಹಾಗೂ ಎಲ್ಲಾ ಸಂಚಾಲಕರು ಪದಾಧಿಕಾರಿಗಳು ಸದಸ್ಯರು ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಹಲವು ವಿಚಾರಗಳನ್ನ ಚರ್ಚಿಸಿ ಈ ವರ್ಷದ ಕಾರ್ಯಕ್ರಮವನ್ನ ಹಿಂದಿಗಿಂತಲೂ ಸುಂದರ ಹಾಗೂ ಅಚ್ಚು ಕಟ್ಟಾಗಿ ನಡೆಸಲು ತೀರ್ಮಾನ ಮಾಡಲಾಯಿತು.
ಸಭೆಯಲ್ಲಿ ರಿಕ್ಷಾ ಹಾಗೂ ದ್ವಿ ಚಕ್ರ ವಾಹನಗಳಿಗೆ ಪ್ರಚಾರಕ್ಕಾಗಿ ಸಿದ್ಧಕಟ್ಟೆ ದಸರಾ ಸ್ಟಿಕ್ಕರ್ ಹಂಚಲಾಯಿತು, ಶಾರದಾ ಮಾತೆಯ ಪೂಜೆಯ 10 ರಸೀದಿಗಳ 1 ಬುಕ್ ಪ್ರತಿಯೊಬ್ಬರಿಗೂ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಮೀಳಾ ಲೋಕೇಶ್ ಪ್ರಾರ್ಥನೆ ಮಾಡಿದರು. ದಿನೇಶ ಶೆಟ್ಟಿಗಾರ್ ಸ್ವಾಗತಿಸಿದರು. ದಾಮೋದರ್ ಪಿ ದೋಟ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನ ಲಿಖಿತಾ ನಾರ್ಲೊಟ್ಟು ನಿರೂಪಿಸಿ ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು