3:37 PM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ಬಿ.ಸಿ. ರೋಡ್ ಉದ್ವಿಗ್ನ: 144 ಸೆಕ್ಷನ್ ಜಾರಿ?; ರ‍್ಯಾಪಿಡ್ ಅಕ್ಷನ್ ಪೋಸ್೯, ಕೆಎಸ್‌ಆರ್‌ಪಿ ತುಕಡಿ ಆಗಮನ; ಖಾಕಿ ಸರ್ಪಗಾವಲು

16/09/2024, 21:58

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕೋಮು ಸಂಘರ್ಷದ ಭೀತಿಯ ಹಿನ್ನೆಲೆಯಲ್ಲಿ ಬಂಟ್ವಾಳದ ಬಿ.ಸಿ. ರೋಡ್ ಪೇಟೆಗೆ ಸೋಮವಾರ ರ‍್ಯಾಪಿಡ್ ಅಕ್ಷನ್ ಪೋಸ್೯ ಹಾಗೂ ಕೆಎಸ್‌ಆರ್‌ಪಿ ತುಕಡಿ ಆಗಮಿಸಿದ್ದು, ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ.





ಪುರಸಭೆ ಮಾಜಿ ಅಧ್ಯಕ್ಷರೊಬ್ಬರ ಸವಾಲನ್ನು ಸ್ವೀಕರಿಸಿ ವಿಹಿಂಪ ಪ್ರಾಂತ ಸಂಚಾಲಕ ಶರಣ್ ಪಂಪ್‌ವೆಲ್ ಅವರು ಬಿ.ಸಿ. ರೋಡಿಗೆ ಬಂದು ಸಂಘ ಪರಿವಾರ ಸಂಘಟನೆಯ ಕಾರ್ಯಕರ್ತರನ್ನುದ್ಧೇಶಿಸಿ ಮಾತನಾಡಿ ತೆರಳಿದ್ದರು. ಬಳಿಕ ಬಿ.ಸಿ. ರೋಡಿನ ಹೆದ್ದಾರಿಯಲ್ಲಿ ಮುಸ್ಲಿಂ ಯುವಕರು ಬೈಕ್, ಕಾರಿನಲ್ಲಿ ಧ್ವಜ ಹಿಡಿದು ಘೋಷಣೆ ಕೂಗಿ ಮೆರವಣಿಗೆ ನಡೆಸಿದರು. ಈ ಮಧ್ಯೆ ಹಿಂದೂ ಸಂಘಟನೆಯವರು ತಮಗೂ ರ್ಯಾಲಿ ನಡೆಸಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಘೋಷಣೆ ಕೂಗಲಾರಂಭಿಸಿದರು.
ಈ ಸಂದರ್ಭ ಡಿವೈಎಸ್ಪಿ ವಿಜಯಪ್ರಸಾದ್, ಇನ್ಸ್‌ಪೆಕ್ಟರ್ ಅನಂತಪದ್ಮನಾಭ ಹಾಗೂ ಹಾಗೂ ಇತರೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಹಿಂದೂ ಕಾರ್ಯಕರ್ತರನ್ನು ಸಮಾಧಾನಪಡಿಸಿ ಬದಿಗೆ ಸರಿಸಿದರು. ಆಗ ಪೊಲೀಸ್ ಅಧಿಕಾರಿಗಳು ಮತ್ತು ಹಿಂದೂ ಕಾರ್ಯಕರ್ತರ ಮಧ್ಯೆ ವಾಗ್ವಾದವೇ ನಡೆಯಿತಲ್ಲದೆ ಪೊಲೀಸರ ಯಾವುದೇ ಮಾತನ್ನು ಕೇಳುವ ಸ್ಥಿತಿಯಲ್ಲಿ ಹಿಂದೂ ಕಾರ್ಯಕರ್ತರು ಇರಲಿಲ್ಲ. ಮೆರವಣಿಗೆಗೆ ಅವಕಾಶ ನೀಡುವುದಿಲ್ಲ ಎಂದು ವಾಗ್ದಾನ ಕೊಟ್ಟರೂ, ಬೈಕ್ ರ‍್ಯಾಲಿಗೆ ಅವಕಾಶ ನೀಡಿದವರು ಯಾರು? ಪೊಲೀಸರ ವೈಫಲ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ ರಸ್ತೆಯಲ್ಲಿ ಕುಳಿತು ಪ್ರತಿಭಟನೆಗೂ ಮುಂದಾದರು. ಇದರೊಂದಿಗೆ ಬಿ.ಸಿ.ರೋಡು ಪೇಟೆ ಎರಡನೇ ಬಾರಿಗೆ ಉದ್ವಿಗ್ನ ಪರಿಸ್ಥಿತಿಗೆ ತಿರುಗಿತು. ಮಾಹಿತಿ ಪಡೆದ ತಹಶೀಲ್ದಾರ್ ಆರ್ಚನಾ ಭಟ್ ಅವರು ಸ್ಥಳಕ್ಕೆ ಧಾವಿಸಿ ಬಂದು ಆಕ್ರೋಶಿತ ಕಾರ್ಯಕರ್ತರನ್ನು ಸಮಾಧಾನಪಡಿಸಿದರು.
ಆಗ ಯುವಕರು ತಮಗೂ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಪರಿಸ್ಥಿತಿ ಕೈ ಮೀರುವ ಸುಳಿವು ಸಿಕ್ಕಿದ ಪೊಲೀಸ್ ಅಧಿಕಾರಿಗಳು ಕೆಎಸ್‌ಆರ್‌ಪಿ., ರ‍್ಯಾಪಿಡ್ ಅಕ್ಷನ್ ಪೋಸ್೯, ಹೆಚ್ಚುವರಿ ಸಿಬ್ಬಂದಿಗಳನ್ನು ರಸ್ತೆಯುದ್ದಕ್ಕೂ ಸರ್ಪಗಾವಲು ಹಾಕಲಾಯಿತು.
ಡಿವೈಎಸ್ಪಿ ವಿಜಯಪ್ರಸಾದ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಅನಂತಪದ್ಮನಾಭ ಅವರು ಸ್ಥಳದಲ್ಲಿದ್ದ ಹಿಂದೂ ಮುಖಂಡರಾದ ನರಸಿಂಹ ಮಾಣಿ, ರಾಮದಾಸ್ ಬಂಟ್ವಾಳ, ಪ್ರಶಾಂತ್ ಕೆಂಪುಗುಡ್ಡೆ ಅವರೊಂದಿಗೆ ಮಾತುಕತೆ ನಡೆಸಿ ಅವರ ಮೂಲಕ ಕಾರ್ಯಕರ್ತರನ್ನು ಸ್ಥಳದಿಂದ ಕಳಿಸಿಕೊಡುವಲ್ಲಿ ಯಶಸ್ವಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು